Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80365

ಕಾವೇರಿಗಾಗಿ ತಮಿಳುನಾಡಿನಿಂದ ಹೊಸ ಕ್ಯಾತೆ

$
0
0

ಚೆನ್ನೈ: ಕಾವೇರಿ ವಿಚಾರದಲ್ಲಿ ಬೆನ್ನು ಬಿಡದೆ ಬೇತಾಳನಂತೆ ಕಾಡ್ತಿರುವ ತಮಿಳುನಾಡಿನ ಹೋರಾಟ ಮತ್ತೊಂದು ರೀತಿಯಲ್ಲಿ ಮುಂದುವರೆದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ 48 ತಾಲೂಕುಗಳಲ್ಲಿ 42 ತಾಲೂಕಗಳನ್ನ ಬರಪೀಡಿತ ಪ್ರದೇಶ ಅಂತಾ ಕರ್ನಾಟಕ ಸರ್ಕಾರ ಘೋಷಣೆ ಮಾಡಿತ್ತು. ಇದಕ್ಕೆ ತಮಿಳುನಾಡು ಕ್ಯಾತೆ ತೆಗೆದಿದ್ದು, ಸರ್ಕಾರದ ಈ ಘೋಷಣೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಕರ್ನಾಟಕ ಸರ್ಕಾರ ಕಾವೇರಿ ಜಲಾನಯನ ಪ್ರದೇಶದ 42 ಬರಪೀಡಿತ ತಾಲೂಕುಗಳು ಅಂತಾ ಘೋಷಿಸಿದೆಯೆಂದು ಅಕ್ಟೋಬರ್ 17ರಂದು ಕೇಂದ್ರ ತಜ್ಞರ ತಂಡ ಸುಪ್ರೀಂಕೋರ್ಟ್‍ಗೆ ಹೇಳಿದೆ. ಆದ್ರೆ ಕರ್ನಾಟಕದ ಹೇಳಿಕೆಯನ್ನು ತಮಿಳುನಾಡು ಒಪ್ಪಿಕೊಂಡಿಲ್ಲ.

ಮುಂಗಾರು ಬೆಳೆ ಅವಧಿಯಲ್ಲಿ ಕರ್ನಾಟಕಕ್ಕೆ 193 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಅವಕಾಶ ಇದೆ. ಈಗಾಗಲೇ 112 ಅಡಿ ಟಿಎಂಸಿ ಅಡಿ ನೀರನ್ನ ನೀರಾವರಿಗಾಗಿ ಹಾಗೂ 12 ಟಿಎಂಸಿ ಅಡಿ ನೀರನ್ನ ಕುಡಿಯಲು ಬಳಸಿಕೊಂಡಿದೆ. ನೀರಾವರಿಗಾಗಿ ಇನ್ನೂ 36.38 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಕರ್ನಾಟಕ ತೀರ್ಮಾನಿಸಿದೆ. ಇದರೊಂದಿಗೆ ಕರ್ನಾಟಕ ನೀರಾವರಿಗಾಗಿ 149 ಟಿಎಂಸಿ ಅಡಿ ನೀರನ್ನ ಬಳಸಿಕೊಂಡಂತಾಗುತ್ತೆ. ಹೀಗಾಗಿ ಕರ್ನಾಟಕ ಕಾವೇರಿ ಕೊಳ್ಳದ ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಘೋಷಿಸಿದ್ದು ಸರಿಯಲ್ಲ ಎಂದು ಸುಪ್ರೀಂಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದೆ.


Viewing all articles
Browse latest Browse all 80365

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>