ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗಲು ರೆಡಿಯಾಗಿದ್ದರೆ ನಿಮ್ಮ ಅನುಕೂಲಕ್ಕೆಂದು ಕೆಎಸ್ಆರ್ಟಿಸಿ ಈ ಬಾರಿ 1500ಕ್ಕೂ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ. ಅಕ್ಟೋಬರ್ 28ರಿಂದ ನವೆಂಬರ್ 1ರವರೆಗೆ ಈ ಬಸ್ ಸಂಚಾರ ವ್ಯವಸ್ಥೆ ಲಭ್ಯವಾಗಲಿದೆ. ಅಲ್ಲದೆ ನಿಮ್ಮೂರುಗಳಿಂದ ಬೆಂಗಳೂರಿಗೆ ವಾಪಸ್ ಬರಲು ಅಕ್ಟೋಬರ್ 31 ಹಾಗೂ ನವೆಂಬರ್ 1ರಂದು ವಿಶೇಷ ಟ್ರಿಪ್ ಕಲ್ಪಿಸಲು ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ.
ಎಲ್ಲಿಂದ ಎಲ್ಲಿಗೆ ಬಸ್ ಸಂಚಾರ?: ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ಪಾವಗಡ, ಹೊಸದುರ್ಗ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ. ತಮಿಳುನಾಡು ಮತ್ತು ಆಂಧ್ರಪ್ರದೇಶ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಬಸ್ಗಳು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಹೊರಡಲಿದೆ.
ಬೆಂಗಳೂರು ನಗರದ ವಿಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ವಾಯುವ್ಯ ಕರ್ನಾಟಕದ ಪ್ರದೇಶಗಳ ಕಡೆಗೆ (ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ ಇತ್ಯಾದಿ) ಕಾರ್ಯಾಚರಣೆಯಾಗುವ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲಾದ ವಿಶೇಷ ಸಾರಿಗೆಗಳನ್ನು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಈ ಮಾರ್ಗಗಳಲ್ಲಿ ಕಾರ್ಯಾಚರಿಸುವ ಮುಂಗಡ ಕಾಯ್ದಿರಿಸದ ವಿಶೇಷ ಸಾರಿಗೆಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಕಾರ್ಯಾಚರಣೆ ಮಾಡಲಾಗುವುದು.
ಈಶಾನ್ಯ ಕರ್ನಾಟಕದ ಪ್ರದೇಶಗಳ ಕಡೆಗೆ (ಕಲಬುರಗಿ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ್ ಇತ್ಯಾದಿ) ಕಾರ್ಯಾಚರಣೆಯಾಗುವ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲಾದ ವಿಶೇಷ ಸಾರಿಗೆಗಳನ್ನು ಪೀಣ್ಯದ ಶ್ರೀ ಬಸವೇಶ್ವರ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಇದೇ ಮಾರ್ಗಗಳಲ್ಲಿ ಕಾರ್ಯಾಚರಿಸುವ ಮುಂಗಡ ಕಾಯ್ದಿರಿಸದ ವಿಶೇಷ ಸಾರಿಗೆಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಕಾರ್ಯಾಚರಣೆ ಮಾಡಲಾಗುವುದು.
ಸಾರ್ವಜನಿಕ ಪ್ರಯಾಣಿಕರು ಬೆಂಗಳೂರು ನಗರದಲ್ಲಿರುವ 148, ಮೈಸೂರು ನಗರದಲ್ಲಿರುವ 18 ಹಾಗೂ ಮಂಗಳೂರಿನಲ್ಲಿರುವ 34 ಹಾಗೂ ರಾಜ್ಯದ ಇತರೆ ಸ್ಥಳಗಳಲ್ಲಿರುವ 230 ಗಣಕೀಕೃತ ಬುಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.