Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ಕರ್ನಾಟಕ ಸರ್ಕಾರ ಮತ್ತು ಪೋಲಿಸರ ವಿರುದ್ಧ ಎಂಇಎಸ್‍ನಿಂದ ಮೋದಿಗೆ ಪತ್ರ

$
0
0

ಬೆಳಗಾವಿ: ಗಡಿ ಭಾಗದ ಜಿಲ್ಲೆಯಾದ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕರ್ನಾಟಕ ಸರ್ಕಾರ ಮತ್ತು ಪೋಲಿಸರ ವಿರುದ್ಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಬೆಳಗಾವಿ ನಗರದಲ್ಲಿ ಎಂಇಎಸ್ ಸಂಘಟನೆಯು ಕರಾಳ ದಿನ ಆಚರಿಸಿತ್ತು. ಸರ್ಕಾರ ಇದರ ವಿರುದ್ಧ ಕ್ರಮಕೈಗೊಂಡ ಹಿನ್ನಲೆಯಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.

mes-1

ಪತ್ರದಲ್ಲೇನಿದೆ?: ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಬೆಳಗಾವಿ, ಕಾರವಾರ ಮತ್ತು ಬೀದರ್ ಜಿಲ್ಲೆಗಳಲ್ಲಿ ಮರಾಠಿ ಭಾಷೆ ಮತ್ತು ಸಂಸ್ಕøತಿಯ ಜನರಿದ್ದ ನಮ್ಮನ್ನು 1956 ರಿಂದ ಬೇರೆ ಭಾಷೆ, ಸಂಸ್ಕøತಿ ಇರುವ ಕರ್ನಾಟಕಕ್ಕೆ ಸೇರಿಸಿ ಅನ್ಯಾಯ ಮಾಡಲಾಗಿದೆ. ಈ ಅನ್ಯಾಯ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಎಂಬ ಸಂಘಟನೆಯನ್ನು ಮಾಡಿಕೊಂಡು ನವೆಂಬರ್ 1 ರಂದು ಕರಾಳ ದಿನ ಆಚರಿಸುತ್ತಾ ಬಂದಿದ್ದೇವೆ. ಕರ್ನಾಟಕ ಸರ್ಕಾರ ಹಾಗೂ ಪೋಲಿಸರು ಅಧಿಕಾರ ದುರ್ಬಳಕೆ ಮಾಡಿಕೊಂಡು ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಮಹಿಳೆಯರು ಮತ್ತು ವೃದ್ಧರಿಗೆ ಹಿಂಸೆಯನ್ನು ನೀಡಿದ್ದಾರೆ. ಅಲ್ಲದೇ ಕರಾಳ ದಿನದಲ್ಲಿ ಭಾಗಿಯಾದ ಮೇಯರ್ ಮತ್ತು ಉಪ ಮೇಯರ್ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಈ ರೀತಿ ಹಿಂದೆಯೂ ಕ್ರಮ ಕೈಗೊಂಡು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಗಡಿ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಎರಡೂ ರಾಜ್ಯಗಳ ಸಿಎಂಗಳನ್ನು ಮಾತುಕತೆಗೆ ಆಹ್ವಾನಿಸಿದ್ದರು. ಆಗ ಕರ್ನಾಟಕ ಸಿಎಂ ಹೇಳದೆ ದೆಹಲಿಯಿಂದ ಕಾಲ್ಕಿತ್ತಿದ್ದರು. ಕೂಡಲೇ ತಾವು ಮಧ್ಯಪ್ರವೇಶಿಸಿ ನಮಗೆ ಅನ್ಯಾಯ ಆಗುತ್ತಿರುವುದನ್ನು ತಡೆದು, ನಮಗೆ ಕಿರುಕುಳ ನೀಡದಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಪತ್ರದಲ್ಲಿ ಬರೆಯಲಾಗಿದೆ.

mes

ಇದೇ ತಿಂಗಳು 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸುತ್ತಿರುವುದರ ಹಿನ್ನಲೆಯಲ್ಲಿ ಈ ಪತ್ರ ಮಹತ್ವ ಪಡೆದುಕೊಂಡಿದೆ.

 


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>