Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80435

ಹೆಬ್ಬಾಳ ಉಪಚುನಾವಣಾ ಪ್ರಚಾರದಲ್ಲಿ ಹೆಲ್ಮೆಟ್‍ನದ್ದೇ ಸದ್ದು

$
0
0

 

hebbala helmet

ಬೆಂಗಳೂರು: ಹೆಬ್ಬಾಳ ಉಪಚುನಾವಣೆಗಾಗಿ ಮತದಾರರ ಮನವೊಲಿಸಲು ಕಮಲ ಮತ್ತು ಕೈ ಪಕ್ಷದಿಂದ ನಡೆಯುತ್ತಿರುವ ಪ್ರಚಾರದ ಭರಾಟೆ ಜೋರಾಗಿದೆ. ಆದರೆ ಪ್ರಚಾರದ ವೇಳೆ ಮೆರವಣಿಗೆಯಲ್ಲಿ ಪಕ್ಷಗಳ ಕಾರ್ಯಕರ್ತರು ಹೆಲ್ಮೆಟ್ ಧರಿಸಿ ಪ್ರಚಾರ ನಡೆಸಿದ್ದಾರೆ.

ಇಂದು ಸಂಜಯ್ ನಗರದ ರಾಧಾಕೃಷ್ಣ ವಾರ್ಡ್‍ನಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ್ ಸ್ವಾಮಿ ಪರವಾಗಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಶಾಸಕ ಅಶ್ವಥ್ ನಾರಾಯಣ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ತೆರೆದ ವಾಹನದಲ್ಲಿ ಪ್ರಚಾರ ನಡೆಸಿದರು. ಸಂಜಯ್ ನಗರದ ರಾಧಾಕೃಷ್ಣ ದೇವಸ್ಥಾನದಿಂದ ಪ್ರಚಾರ ಆರಂಭವಾಗಿ ಕಾರ್ಯಕರ್ತರಿಂದ ಬೈಕ್‍ನಲ್ಲಿ ಮೆರವಣಿಗೆ ನಡೆಯಿತು. ಈ ವೇಳೆ ಬುಲೆಟ್ ಓಡಿಸಿ ಬೈಕ್ ಮೆರವಣಿಗೆಗೆ ಡಿವಿಎಸ್ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಹೆಲ್ಮೆಟ್ ಹಾಕಿಕೊಂಡು ಬೈಕ್ ಓಡಿಸಿದರು. ಅಲ್ಲದೇ ಈ ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ, ನಟ ಜಗ್ಗೇಶ್ ಸಹ ಭಾಗಿಯಾಗಿದ್ದರು.

ಇತ್ತ ಕಾಂಗ್ರೆಸ್ ಅಭ್ಯರ್ಥಿ ರೆಹಮಾನ್ ಷರೀಫ್ ಪರವಾಗಿ ಬಿ.ಕೆ ಹರಿಪ್ರಸಾದ್ ಪಾದಯಾತ್ರೆ ಮಾಡುವ ಮೂಲಕ ಮತ ಯಾಚಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಕುತಂತ್ರದ ಪ್ರಚಾರ ಮಾಡ್ತಿದೆ. ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಬಿಜೆಪಿಯ ಹಾಗೆ ಮೋದಿ ಫೋಟೋ ಇಟ್ಕೊಂಡು ಮತ ಕೇಳಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಾರಿಗೆ ಸಚಿವರಿಗೆ ಹೆಲ್ಮೆಟ್ ಇಲ್ಲ: ಬಿಜೆಪಿ ಕಾರ್ಯಕರ್ತರ ಬೈಕ್ ಮೆರವಣಿಗೆಗೆ ಚಾಲನೆ ನೀಡಿದ ಡಿವಿ ಸದಾನಂದಗೌಡ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿದರು. ಆದರೆ ಎಲ್ಲರೂ ಹೆಲ್ಮೆಟ್ ಹಾಕಿ ಬೈಕ್ ಮೆರವಣಿಗೆ ಮಾಡಬೇಕು ಎಂದಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ಮೆರವಣಿಗೆಗೆ ಆಗಮಿಸಿ ಹೆಲ್ಮೆಟ್ ತರದಿದ್ದರಿಂದ ಮುಜುಗರ ಅನುಭವಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ಹೆಲ್ಮೆಟ್ ಹಾಕಿರಲಿಲ್ಲವಾದ್ದರಿಂದ ಸಾರಿಗೆ ಸಚಿವರಾಗಿ ನಾನು ಏನು ಉತ್ತರ ಕೊಡಲಿ? ನಾನು ಭಾಗವಹಿಸಲ್ಲ ಎಂದು ಹೇಳಿ ವಾಪಾಸ್ ಹೋದರು.


Viewing all articles
Browse latest Browse all 80435

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>