ಚಿತ್ರದುರ್ಗ: ಕಾಂಗ್ರೆಸ್ ರಾಜ್ಯದಲ್ಲಿ ನಿರ್ನಾಮ ಆಗುತ್ತದೆ ಎನ್ನುವುದಕ್ಕೆ ಪಕ್ಷದವರೇ ಆದ ಜನಾರ್ಧನ ಪೂಜಾರಿ ಹೇಳಿಕೆ ಸಾಕ್ಷಿಯಾಗಿದೆ. ಆದರೆ ಸಿದ್ದರಾಮಯ್ಯ ಕಾಂಗ್ರೆಸ್ ಮುಂದೆಯೂ ಗೆಲ್ಲುತ್ತದೆ ಎಂಬ ಭ್ರಮಯಲ್ಲಿದ್ದಾರೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ದೇವದುರ್ಗದ ಉಪ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಹಣ ಹಂಚಲು ಜಾತಿಗೊಬ್ಬ ಮಂತ್ರಿಗಳು ಹಣ ಚೀಲವಿಡಿದುಕೊಂಡು ಕುಳಿತಿದ್ದಾರೆ. ಕಾಂಗ್ರೆಸ್ಗೆ ಸೋಲೆ ಇಲ್ಲ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಮೈಸೂರಿನಲ್ಲಿ ಸಿಎಂ ತವರಿನಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಕಾಂಗ್ರೆಸ್ ಆಡಳಿತ ವೈಖರಿಯ ಬಗ್ಗೆ ಮಾತನಾಡಿರುವುದು ಮುಂದೆ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರು ತಿರಸ್ಕರಿಸುತ್ತಾರೆ ಎಂಬ ಸಂದೇಶ ಸಾರುತ್ತದೆ ಎಂದು ಅವರು ತಿಳಿಸಿದ್ದಾರೆ.