ಉಡುಪಿ: ಕುಂದಾಪುರದ ಗುಡ್ಡಟ್ಟು ಪ್ರದೇಶದಲ್ಲಿ ಚಿರತೆ ಸೆರೆಯಾಗಿದೆ. ಕೆಲವು ತಿಂಗಳುಗಳಿಂದ ನಿರಂತರವಾಗಿ ಭಯದ ವಾತಾವರಣ ಸೃಷ್ಟಿಸಿದ್ದ ಈ ಚಿರತೆ ಕೊನೆಗೂ ಕಳೆದ ರಾತ್ರಿ ಬೋನಿಗೆ ಬಿದ್ದಿದೆ.
ಕುಂದಾಪುರ ತಾಲೂಕಿನ ಶಂಕರನಾರಾಯಣ ಅರಣ್ಯ ಇಲಾಖೆ ವ್ಯಾಪ್ತಿಯ ಯಡ್ಯಾಡಿ ಮತ್ಯಾಡಿ ಗ್ರಾಮದಲ್ಲಿ ದಿನೇ ದಿನೇ ಚಿರತೆ ಉಪಟಳ ಹೆಚ್ಚಿದ್ದು, ಸಾಕು ಪ್ರಾಣಿಗಳು ಬಲಿಯಾಗುತ್ತಿದ್ದವು. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಯವರು ಕಳೆದ ತಿಂಗಳು ಚಂದ್ರಾವತಿ ಗುಡ್ಡೆಮನೆ ಎಂಬವರ ಜಾಗದಲ್ಲಿ ಬೋನು ಇಟ್ಟಿದ್ದರು. ಇದನ್ನೂ ಓದಿ: ಕೋಟದಲ್ಲಿ ಉರುಳಿಗೆ ಬಿದ್ದ ಆರು ವರ್ಷದ ಗಂಡು ಚಿರತೆ
ಸಾಕಷ್ಟು ಉಪಟಳ ನೀಡಿದ್ದ ಚಿರತೆ ಬೋನು ಇಲ್ಲದಲ್ಲೆಲ್ಲಾ ಓಡಾಡುತ್ತಿತ್ತು. ಕೊನೆಗೂ ಇಂದು ಬೆಳಿಗ್ಗೆ ಬೋನಿಗೆ ಬಿದ್ದಿದೆ. ಸೆರೆಸಿಕ್ಕ ಚಿರತೆಯನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿ ಕೊಲ್ಲೂರು ಅಭಯಾರಣ್ಯಕ್ಕೆ ರವಾನಿಸಿದ್ದಾರೆ. ಸುಮಾರು 5 ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಅರಣ್ಯಾಧಿಕಾರಿ ಚಿರತೆಯನ್ನು ಪರಿಶೀಲಿಸಿ ಅಭಯಾರಣ್ಯ ಬಿಟ್ಟಿದ್ದಾರೆ. ಇದನ್ನೂ ಓದಿ: ಕರು ತಿನ್ನಲು ಬಂದಿದ್ದ ಚಿರತೆಯನ್ನು ಸೆರೆಹಿಡಿದ ರೈತರು
ಅರಣ್ಯಾಧಿಕಾರಿಗಳು ಸೆರೆ ಹಿಡಿದ ಚಿರತೆಯನ್ನು ಕೊಲ್ಲೂರು ಅಭಯಾರಣ್ಯಕ್ಕೆ ಬಿಟ್ಟು ಬಿಡುತ್ತಾರೆ. ಆದ್ರೆ ಚಿರತೆಗಳು ವಾಪಾಸ್ ಅದೇ ಜಾಗಕ್ಕೆ ಬಂದು ಉಪಟಳ ನೀಡುವುದು ಸಾಮಾನ್ಯವಾಗಿದೆ. ಇದಕ್ಕೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
The post ಕುಂದಾಪುರದಲ್ಲಿ ಬೋನಿಗೆ ಬಿತ್ತು ದೈತ್ಯ ಗಂಡು ಚಿರತೆ appeared first on Public TV News.