Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ಗಂಗಾ ಆರತಿಯಂತೆ ಕಾವೇರಿ ನದಿಗೂ ನೂರನೇ ಮಹಾ ಆರತಿ

$
0
0

– ನೀರನ್ನು ಕಾಪಾಡುವಂತೆ ಚಕ್ರವರ್ತಿ ಸೂಲಿಬೆಲೆ ಕರೆ

ಮಡಿಕೇರಿ: ಉತ್ತರ ಭಾರತದಲ್ಲಿ ಗಂಗಾ ನದಿ ಮಲೀನವಾಗುತ್ತಿರುವಂತೆ ದಕ್ಷಿಣದಲ್ಲಿ ಕಾವೇರಿ ಮಲೀನವಾಗುತ್ತಿದ್ದಾಳೆ. ಕಾವೇರಿಯನ್ನು ಸ್ವಚ್ಚಗೊಳಿಸಲು ಆಂದೋಲನಗಳು ನಡೆಯುತ್ತಿದ್ದು, ಇದೀಗ ಗಂಗಾ ನದಿಯಂತೆ ಕಾವೇರಿಗೂ ಮಹಾ ಆರತಿ ನಡೆಸಲಾಗುತ್ತಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಶುಕ್ರವಾರ ಕಾವೇರಿ ನದಿಗೆ ಸುತ್ತುರು ಶ್ರೀಗಳು ಗಣ್ಯ ವ್ಯಕ್ತಿಗಳು ನೂರನೇ ಮಹಾ ಆರತಿ ನೆರವೇರಿಸಿದರು. ಇತ್ತೀಚಿನ ದಿನಗಳಲ್ಲಿ ದಕ್ಷಿಣದಲ್ಲಿ ಕಾವೇರಿ ನದಿ ಕೂಡ ವರ್ಷದಿಂದ ವರ್ಷಕ್ಕೆ ಮಲೀನವಾಗುತ್ತಿದ್ದಾಳೆ. ಇದನ್ನೂ ಓದಿ: ಗಂಗೆ ಮಲೀನವಾಗಬಾರದೆಂದು ಪ್ರತಿದಿನ ಕಸ ಎತ್ತುತ್ತಿರುವ ಮೀನುಗಾರ

ಕುಶಾಲನಗರದ ಕಾವೇರಿಯನ್ನು ರಕ್ಷಿಸಿ ಆಂದೋಲನ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದೆ. ಇದರೊಂದಿಗೆ ಕಾವೇರಿ ಸ್ವಚ್ಚತಾ ಆಂದೋಲನ ಸಮಿತಿ ಕಳೆದ ಒಂಬತ್ತು ವರ್ಷಗಳಿಂದ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನದಿಗೆ ಮಹಾ ಆರತಿ ನಡೆಸುತ್ತಾ ಬಂದಿದ್ದು, ಶುಕ್ರವಾರ ನೂರನೇ ಮಹಾ ಆರತಿ ನಡೆಸಲಾಯಿತು.

ಕಾವೇರಿ ನದಿ ಹಬ್ಬ ನಡೆಸುವ ಮೂಲಕ ನೂರನೇ ಆರತಿಯನ್ನು ಮಾಡಲಾಯಿತು. ಸುತ್ತೂರು ಮಠದ ಸ್ವಾಮೀಜಿಗಳು ಸೇರಿದಂತೆ ಹಲವು ಪ್ರಮುಖರು ಆರತಿಯಲ್ಲಿ ಪಾಲ್ಗೊಂಡಿದ್ದರು. ಕಾವೇರಿ ಸ್ವಚ್ಚತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನೂರಾರು ವಿದ್ಯಾರ್ಥಿಗಳನ್ನು ಕಾವೇರಿ ಹಬ್ಬ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ಕಾವೇರಿ ಸ್ವಚ್ಚತಾ ಕಾರ್ಯಕ್ರಮದ ರೂವಾರಿ ಯುವ ಬ್ರಿಗೇಡ್‍ನ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಕಾವೇರಿ ಹಬ್ಬದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ನೀರನ್ನು ಕಾಪಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಿದರು. ಕಾವೇರಿಯ ತವರು ಕೊಡಗು ಜಿಲ್ಲೆಯ ಹಲವೆಡೆ ಕಾವೇರಿ ಕಲುಷಿತವಾಗುತ್ತಿದೆ. ಕುಶಾಲನಗರದಲ್ಲಿ ಕಲುಷಿತ ನೀರನ್ನು ನೇರವಾಗಿ ಟ್ಯಾಂಕರ್ ಮೂಲಕ ನದಿಗೆ ಬಿಡುವುದು ಕಂಡುಬರುತ್ತಿದೆ. ಇದನ್ನು ತಡೆಗಟ್ಟುಲು ಪ್ರತಿಯೊಬ್ಬರು ಮುಂದಾಗಬೇಕೆಂದು ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು.

The post ಗಂಗಾ ಆರತಿಯಂತೆ ಕಾವೇರಿ ನದಿಗೂ ನೂರನೇ ಮಹಾ ಆರತಿ appeared first on Public TV News.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>