Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80475

ಬೆಳಗಾವಿ: `90′ಜಾಸ್ತಿ ಆಗಿ ಸ್ನೇಹಿತನನ್ನೇ ಕೊಲೆ ಮಾಡಿಬಿಟ್ರು!

$
0
0

ಬೆಳಗಾವಿ: ಕಂಠಪೂರ್ತಿ ಕುಡಿದು ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಾಗರಾಳಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮುರಳೀಧರ್ ವಸಂತ್ ನಿಕ್ಕಂ (33) ಕೊಲೆಯಾದ ವ್ಯಕ್ತಿ. ಫೆಬ್ರವರಿ 10 ರಂದು ಮುರಳೀಧರ್ ಹಾಗೂ ಅವನ ಸ್ನೇಹಿತರಾದ ಬಾಬಲೆ ಗೋಪಾಲ್ ಪವಾರ್ (34), ಹಲಸಿ ಅರಣ್ಯದ ಆದಿವಾಸಿ ಬಬನ ವಿಠ್ಠಲ್ ಪವಾರ್ (35), ಹಲಸಾಲ ಅರಣ್ಯದ ಆದಿವಾಸಿ ಅಂಕುಶ್ ದುಲೇಖಾನ್ ನಿಕ್ಕಂ (34) ಮತ್ತು ಕುಟಿನೋನಗರ ಅರಣ್ಯದ ಆದಿವಾಸಿ ಗೋಪಾಲ್ ಅಜರುನ್ ಪವಾರ (28) ಐವರು ಸೇರಿ ಪಾರ್ಟಿ ಮಾಡಿದ್ದಾರೆ.

ಎಲ್ಲರೂ ಕಂಠಪೂರ್ತಿ ಕುಡಿದು ಐವರ ಮಧ್ಯೆ ಕ್ಷುಲಕ ಕಾರಣಕ್ಕೆ ಜಗಳ ನಡೆದಿದೆ. ಈ ವೇಳೆ ಬಾಬಲೆ, ಬಬನ, ಅಂಕುಶ್ ಮತ್ತು ಗೋಪಾಲ್ ನಾಲ್ವರು ಸೇರಿ ಮುರಳೀಧರನನ್ನು ಕೊಲೆ ಮಾಡಿ ನಾಗರಾಳಿ ಅರಣ್ಯ ಪ್ರದೇಶದಲ್ಲಿ ಹೂತು ಹಾಕಿದ್ದಾರೆ. ಕೊಲೆ ಬಗ್ಗೆ ಯಾರು ದೂರು ನೀಡಿರಲಿಲ್ಲ. ಈ ನಾಲ್ವರು ಒಂದೇ ಕಡೆ ಕಟ್ಟಿಗೆ ಕಡಿಯುವ ಕೆಲಸ ಮಾಡುತ್ತಿದ್ದರು. ಮುರಳೀಧರ್ ಕೆಲಸಕ್ಕೆ ಬಾರದೇ ಕಣ್ಮರೆಯಾಗಿದ್ದರಿಂದ ಗುತ್ತಿಗೆದಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಗುತ್ತಿಗೆದಾರರ ದೂರು ಆಧರಿಸಿ ತನಿಖೆಗಿಳಿದ ನಂದಗಢ ಪೊಲೀಸರು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಳೆಯನನ್ನು ಕೊಲೆ ಮಾಡಿದ ಬಾಬಲೆ, ಬಬನ್, ಅಂಕುಶ್ ಮತ್ತು ಗೋಪಾಲ್ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರ ಮಾಹಿತಿ ಆಧಾರದ ಮೇಲೆ ಎಸಿ ರಾಜಶ್ರೀ ಅವರ ನೇತೃತ್ವದಲ್ಲಿ ಹೂತಿಡಲಾಗಿದ್ದ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ನಗರದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

 

 


Viewing all articles
Browse latest Browse all 80475

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮದುವೆಯಾಗಲು ನಿರ್ಧರಿಸಿದ್ದಾರೆ ಅಮ್ಮ- ಮಗ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>