Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80032

ಭಾರೀ ಮಳೆಗೆ ತತ್ತರಿಸಿದ ಮಡಿಕೇರಿ: ತ್ರಿವೇಣಿ ಸಂಗಮ ಜಲಾವೃತ

$
0
0

 

MDK1ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನದಿ ತೊರೆಗಳು ತುಂಬಿಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲೂ ಮೂರು ಅಡಿ ನೀರು ಹರಿಯುತ್ತಿದ್ದು, ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ.

ಮಡಿಕೇರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಭಾಗಮಂಡಲ ರಸ್ತೆಯಲ್ಲಿ ಮೂರು ಅಡಿಯಷ್ಟು ನೀರು ಹರಿಯುತ್ತಿದ್ದು, ಸಂಚಾರ ದುಸ್ಥರವಾಗಿದೆ.

ನಾಟಿ ಮಾಡಿದ ಗದ್ದೆಗಳೆಲ್ಲಾ ಜಲಾವೃತಗೊಂಡಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 24 ಗಂಟೆಗಳಲ್ಲಿ ಜಿಲ್ಲೆಯಾದ್ಯಂತ 127.7 ಮಿಲಿ ಮೀಟರ್ ಮಳೆಯಾಗಿದೆ. ಮಡಿಕೇರಿಯಲ್ಲಿ ಅತಿಹೆಚ್ಚು 177.5 ಮಿಲಿಮೀಟರ್ ಮಳೆಸುರಿದಿದೆ ಅಂತಾ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಒಟ್ಟಿನಲ್ಲಿ ಮಳೆಯಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಮಳೆಯ ಆರ್ಭಟಕ್ಕೆ ಜಿಲ್ಲೆಯ ಜನ ತತ್ತರಿಸಿದ್ದಾರೆ. ಹೀಗಾಗಿ ತಗ್ಗು ಪ್ರದೇಶಗಳಲ್ಲಿ ಗಂಜಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಅಲ್ಲದೇ ಇದೇ ಪ್ರಮಾಣದಲ್ಲಿ ಮಳೆಯಾದ್ರೆ ಕೆಆರ್‍ಎಸ್ ಡ್ಯಾಂ ಅವಧಿಗೂ ಮುನ್ನವೇ ಭರ್ತಿಯಾಗಲಿದೆ ಅನ್ನೋದು ಅಧಿಕಾರಿಗಳ ಮಾತಾಗಿದೆ.

The post ಭಾರೀ ಮಳೆಗೆ ತತ್ತರಿಸಿದ ಮಡಿಕೇರಿ: ತ್ರಿವೇಣಿ ಸಂಗಮ ಜಲಾವೃತ appeared first on Kannada Public tv.


Viewing all articles
Browse latest Browse all 80032


<script src="https://jsc.adskeeper.com/r/s/rssing.com.1596347.js" async> </script>