Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80355

ಸಚಿವನಾದ್ರೂ ನಾನು ಕಾಮಿಡಿ ಶೋ ಬಿಡಲ್ಲ: ಸಿಧು

$
0
0

ಚಂಡೀಗಢ: ಸಚಿವನಾದ್ರೂ ನಾನು ಟಿವಿಯಲ್ಲಿ ಮಾಡ್ತಿರೋ ಕಾಮಿಡಿ ಶೋ ಬಿಡಲ್ಲ ಎಂದು ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್‍ನ ನೂತನ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ನಿನ್ನೆಯಷ್ಟೇ ಸಿಧು ಪಂಜಾಬ್‍ನ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಹಿಂದೆ ಬಿಜೆಪಿಯಲ್ಲಿದ್ದ ಸಿಧು ಅವರು ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಕೈ ಹಿಡಿದಿದ್ದರು. ಜೊತೆಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಆದರೆ ಈ ಎಲ್ಲ ಕೆಲಸಗಳ ನಡುವೆ ಸಿಧು ಅವರು ದಿ ಕಪಿಲ್ ಶರ್ಮಾ ಶೋನಲ್ಲೂ ಭಾವಹಿಸುತ್ತಿದ್ದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ಬಳಿಕ ಮಾತನಾಡಿದ ಅವರು, ನಾನು ಬೆಳಗ್ಗೆ ಸಚಿವನಾಗಿ ಕೆಲಸ ಮಾಡುತ್ತೇನೆ. ರಾತ್ರಿ ಕಾಮಿಡಿ ಶೋ ಶೂಟಿಂಗ್‍ನಲ್ಲಿ ಭಾಗಿಯಾಗುತ್ತೇನೆ. ಯಾವುದೇ ಕಾರಣಕ್ಕೂ ಕೆಲಸದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದಾರೆ. ಇದೊಂದು ಕಷ್ಟದ ಕೆಲಸ ಎನ್ನುವುದು ಗೊತ್ತು. ಆದರೂ ನಾನು ಕಾಮಿಡಿ ಶೋ ಬಿಡಲ್ಲ. ಪಂಜಾಬಿಗರ ಸಂಪೂರ್ಣ ಸೇವೆಗೂ ನಾನು ಸಿದ್ಧ. ಇದುವೇ ನನ್ನ ಪ್ರಮುಖ ಕೆಲಸ ಎಂದು ಹೇಳಿದರು.

ಇದೇ ವೇಳೆ ನನಗೆ ಸಿಕ್ಕಿರುವ ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ ಎಂದೂ ಸಿಧು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಸಿಧು ಅವರನ್ನು ಪಂಜಾಬ್ ಡಿಸಿಎಂ ಮಾಡುತ್ತಾರೆ ಎಂಬ ವದಂತಿ ಹರಡಿತ್ತು. ಆದರೆ ಸಿಧುಗೆ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಮಾತ್ರ ನೀಡಿದ್ದಾರೆ. ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಈ ಎಲ್ಲಾ ವಿಚಾರಗಳನ್ನು ಸಿಧು ಅವರು ಅಲ್ಲಗಳೆದಿದ್ದಾರೆ. ನನಗೆ ಯಾವುದೇ ಸಿಟ್ಟಿಲ್ಲ. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಿಪಾಯಿಯಂತೆ ನಿರ್ವಹಿಸುತ್ತೇನೆ ಎಂದು ಸಿಧು ಹೇಳಿದರು.


Viewing all articles
Browse latest Browse all 80355

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ