Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ಉತ್ತರಾಖಂಡ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ತ್ರಿವೇಂದ್ರ ಸಿಂಗ್ ರಾವತ್

$
0
0

ಡೆಹ್ರಾಡೂನ್: ಪಂಚರಾಜ್ಯ ಚುನಾವಣೆಯಲ್ಲಿ ಸರಳ ಬಹುಮತ ಗಳಿಸಿದ್ದ ಉತ್ತರಾಖಂಡ್ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರದ ಗದ್ದುಗೆ ಏರಿದೆ. ಉತ್ತರಾಖಂಡ್‍ನ 9ನೇ ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್ ರಾವತ್ ಗದ್ದುಗೆ ಏರಿದ್ದಾರೆ.

ರಾಜ್ಯಪಾಲರಾದ ಕೃಷ್ಣ ಕಾಂತ್ ಪೌಲ್ ಪ್ರಮಾಣ ವಚನ ಬೋಧನೆ ಮಾಡಿದ್ರು. ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು ಭಾಗಿಯಾಗಿದ್ರು.

ದೀರ್ಘ ಕಾಲ ಆರ್‍ಎಸ್‍ಎಸ್ ಪ್ರಚಾರಕರಾಗಿ ಕೆಲಸ ಮಾಡಿರುವ ತ್ರಿವೇಂದ್ರ ಸಿಂಗ್ ರಾವತ್ ಕಳೆದ ಬಾರಿಯ ಲೋಕಸಭಾ ಚುನಾವಣೆ ವೇಳೆ ಅಮಿತ್ ಷಾ ಜೊತೆಗೂಡಿ ಸಾಕಷ್ಟು ಕೆಲಸ ಮಾಡಿದ್ರು. ತ್ರಿವೇಂದ್ರ ಸಿಂಗ್ ರಾವತ್ ಜೊತೆ ಎಲ್ಲರೂ ಈಶ್ವರನ ಹೆಸರಲ್ಲಿ ಪ್ರಮಾಣ ಸ್ವೀಕಾರ ಮಾಡಿದ್ದು ವಿಶೇಷವಾಗಿತ್ತು. ನಿರ್ಗಮಿತ ಸಿಎಂ ಹರೀಶ್ ರಾವತ್ ಕೂಡ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭಹಾರೈಸಿದ್ರು.

ಉತ್ತರಾಖಂಡ್‍ನಲ್ಲಿ 70 ಸ್ಥಾನಗಳಲ್ಲಿ 57 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು.

 


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>