Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ಅಧಿಕಾರಿಗಳ ಆತ್ಮಹತ್ಯೆಗೆ ವಿಪಕ್ಷಗಳೇ ಕಾರಣ: ಪರಮೇಶ್ವರ್

$
0
0

ಬೆಂಗಳೂರು: ಅಧಿಕಾರಿಗಳ ಆತ್ಮಹತ್ಯೆಗೆ ವಿಪಕ್ಷಗಳೇ ಕಾರಣ ಅಂತ ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಪರಮೇಶ್ವರ್, ನೀವು ಇವತ್ತು ಅಧಿಕಾರಿಗಳ ಮೇಲೆ ಒತ್ತಡ ಇದೆ ಅಂತೀರಿ. ನೀವು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ರಿ. ಇವತ್ತು ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಅವತ್ತು ನೀವು ಹಾಕಿದ ಒತ್ತಡ ಕಾರಣ. ಆತ್ಮಹತ್ಯೆಗೆ ಕಾಂಗ್ರೆಸ್ ಕಾರಣವಲ್ಲ ಅಂತ ವಿಪಕ್ಷಗಳ ಮೇಲೆ ಹರಿಹಾಯ್ದಿದ್ದಾರೆ.

2018ರ ಚುನಾವಣೆ ಸಂದರ್ಭದಲ್ಲಿ ಜನ ನಮ್ಮ ಕಡೆ ಬೆರಳು ಮಾಡಿ ತೋರಿಸಬಾರದು. ಉಳಿದ ಎರಡು ವರ್ಷದಲ್ಲಿ ಪ್ರತಿಪಕ್ಷದವರ ಟೀಕೆ ಎದುರಿಸಲು ನಾವು ಸನ್ನದ್ಧರಾಗಿರಬೇಕು. ಸಣ್ಣಪುಟ್ಟ ವಿಷಯಗಳನ್ನು ಇಟ್ಟುಕೊಂಡು ಸರ್ಕಾರಕ್ಕೆ ಮುಜುಗರ ಉಂಟುಮಾಡಲು ಪ್ರತಿಪಕ್ಷದವರು ಪ್ರಯತ್ನಿಸುತ್ತಿದ್ದಾರೆ. ಆದರೆ ಕರ್ನಾಟಕದ ಜನರ ಮುಂದೆ ನಿಮ್ಮ ಬೇಳೆ ಬೇಯಲ್ಲ. ಕಾಂಗ್ರೆಸ್ ಮುಕ್ತ ಭಾರತ ಬಿಜೆಪಿಯಿಂದಷ್ಟೇ ಅಲ್ಲ, ಯಾರಿಂದಲೂ ಸಾಧ್ಯವಿಲ್ಲ ಅಂತ ಹೇಳಿದ್ರು.

ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಆದರೆ ಅದನ್ನು ಬಹಿರಂಗವಾಗಿ ಮಾಧ್ಯಮಗಳ ಎದುರು ಹೇಳಿಕೆ ನೀಡಬಾರದು. ಒಂದು ವೇಳೆ ಬಹಿರಂಗ ಹೇಳಿಕೆ ನೀಡಿದರೆ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಅಂತ ಎಚ್ಚರಿಕೆ ನೀಡಿದ್ರು.

 

The post ಅಧಿಕಾರಿಗಳ ಆತ್ಮಹತ್ಯೆಗೆ ವಿಪಕ್ಷಗಳೇ ಕಾರಣ: ಪರಮೇಶ್ವರ್ appeared first on Kannada Public tv.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ