Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ಆರತಕ್ಷತೆ ವೇಳೆ ಹೀಲ್ಡ್ ಚಪ್ಪಲಿ ಧರಿಸಿ, ಸುಸ್ತಾಗಿ ಬಿದ್ದ ವಧು- ಮದುವೆ ಕ್ಯಾನ್ಸಲ್!

$
0
0

ಬೆಂಗಳೂರು: ಆರತಕ್ಷತೆ ವೇಳೆ ಹೀಲ್ಡ್ ಚಪ್ಪಲಿ ಧರಿಸಿದ್ದ ವಧು ಸುಸ್ತಾಗಿ ಬಿದ್ದ ಕಾರಣವನ್ನೇ ನೆಪವಾಗಿಟ್ಟುಕೊಂಡು ವರ ಮದುವೆಯನ್ನೇ ಮುರಿದ ಘಟನೆ ರಾಮನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.

ರಾಮನಗರದ ಶಾಂತಿಲಾಲ್ ಲೇಔಟ್‍ನ ಚೈತ್ರ ಹಾಗೂ ತುಮಕೂರಿನ ಕುಣಿಗಲ್ ತಾಲೂಕಿನ ಹೊಸದೊಡ್ಡಿ ಗ್ರಾಮದ ಪ್ರದೀಪ್ ಕುಮಾರ್ ವಿವಾಹ ಇಂದು ನಡೆಯಬೇಕಿತ್ತು. ಆದ್ರೆ ಕಳೆದ ರಾತ್ರಿ ಅರತಕ್ಷತೆ ವೇಳೆ ವಧು ಚೈತ್ರ ಹೀಲ್ಡ್ ಚಪ್ಪಲಿ ಧರಿಸಿ 3 ಗಂಟೆ ಆರತಕ್ಷತೆಗೆಂದು ನಿಂತಿದ್ದರಿಂದ ಸುಸ್ತಾಗಿ ಬಿದ್ದಿದ್ದರು. ಹಿಮ್ಮುಖವಾಗಿ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ವಧುವನ್ನು ನೀರು ಕುಡಿಸಿ ಸುಧಾರಿಸಲಾಗಿತ್ತು. ಆದ್ರೆ ಇದನ್ನೇ ನೆಪವಾಗಿಟ್ಟುಕೊಂಡ ವರ ಪ್ರದೀಪ್ ಆಕೆಗೆ ಮೂರ್ಛೆ ರೋಗವಿದೆ ಎಂದು ತಗಾದೆ ತೆಗೆದಿದ್ದಾನೆ.

ಇದ್ರಿಂದ ಆತಂಕಗೊಂಡ ವಧುವಿನ ಕಡೆಯುವರು ರಾತ್ರಿಯಿಡೀ ರಾಜಿ ಸಂಧಾನ ನಡೆಸಿದ್ರೂ ಕೂಡ ವರ ಮದುವೆಗೆ ಒಪ್ಪಿಲ್ಲ. ಇಂದು ಬೆಳಗ್ಗೆ ಕೂಡ ರಾಜಿ ಸಂಧಾನ ನಡೆಸಿದ್ರೂ ವಿಫಲವಾಗಿದೆ. ಅಲ್ಲದೇ ವರನ ಕಡೆಯವರು ಮದುವೆ ಮುರಿದು ಬಿದ್ದಿದ್ದಕ್ಕೆ ವಧುವಿನ ಕುಟುಂಬಕ್ಕೆ 6 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಿ ಕೈ ತೊಳೆದುಕೊಂಡಿದ್ದಾರೆ.


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>