Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80332

ಕುಡಿತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ ಇಬ್ಬರ ದುರ್ಮರಣ!

$
0
0

ಕೋಲಾರ: ಕುಡಿತದ ಚಟ ಬಿಡಲು ನಾಟಿ ಔಷಧಿಯನ್ನ ಕುಡಿದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಗವಾರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.

ನಗವಾರ ಗ್ರಾಮದ 55 ವರ್ಷದ ಚಲಪತಿ ಹಾಗೂ 38 ವರ್ಷದ ಶಂಕರಪ್ಪ ಎಂಬುವರು ಮೃತ ದುರ್ದೈವಿಗಳು.

ಇವರು ಕಳೆದ ಹಲವು ದಿನಗಳಿಂದ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ರು, ಕುಡಿತದ ಚಟಕ್ಕೊಳಗಾಗಿದ್ದರಿಂದ ಚಟ ಬಿಡಿಸುವ ಸಲುವಾಗಿ ಸಂಬಂಧಿಕರು ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯ ಉಪ್ಪರಹಳ್ಳಿಯಲ್ಲಿ ನಾಟಿ ಔಷಧಿಯನ್ನ ಕೊಡಿಸಿ ಕರೆದುಕೊಂಡು ಬಂದಿದ್ರು. ಅಲ್ಲಿ ನಾಟಿವೈದ್ಯ ಸುಬ್ರಮಣಿ ಎಂಬಾತ ಮದ್ಯಪಾನದೊಂದಿಗೆ ನಾಟಿ ಔಷಧಿಯನ್ನ ಬೆರಸಿ ಕುಡಿಯಲು ನೀಡಿದ್ದನು. ಅದನ್ನ ಕುಡಿದು ಮನೆಗೆ ಬಂದ ಇಬ್ಬರು ತೀವ್ರ ಅಸ್ವಸ್ಥರಾಗಿ ಚಲಪತಿ ಎಂಬುವವರು ಮನೆಯಲ್ಲಿಯೆ ಮೃತಪಟ್ಟಿದ್ರೆ, ತೀವ್ರ ಅಸ್ವಸ್ಥನಾಗಿದ್ದ ಶಂಕರ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾರೆ.

ಇಬ್ಬರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ನಂಗಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 


Viewing all articles
Browse latest Browse all 80332

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>