Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ಕಿರುಕುಳ ನೀಡಿ, ಗನ್ ತೋರಿಸಿ ಮದುವೆ: ಪಾಕ್ ಪ್ರಜೆಯನ್ನು ವರಿಸಿದ್ದ ಭಾರತೀಯ ಮಹಿಳೆ ತವರಿಗೆ ವಾಪಾಸ್

$
0
0

ನವದೆಹಲಿ: ಬಲವಂತವಾಗಿ ಪಾಕ್ ಪ್ರಜೆಯನ್ನು ಮದುವೆಯಾಗಿದ್ದ ಭಾರತೀಯ ಯುವತಿಯೊಬ್ಬರು ಇದೀಗ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಉಜ್ಮಾ ಎಂಬವರೇ ಇಂದು ವಾಘಾ ಗಡಿಯ ಮೂಲಕ ಭದ್ರತೆಯೊಂದಿಗೆ ತವರಿಗೆ ಕಾಲಿಟ್ಟ ಯುವತಿಯಾಗಿದ್ದಾರೆ.

ಏನಿದು ಪ್ರಕರಣ?: 20 ವರ್ಷದ ಉಜ್ಮಾ ಎಂಬವರು ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ಸಂದರ್ಭದಲ್ಲಿ ಪಾಕ್ ಪ್ರಜೆ ತಹೀರ್ ಆಲಿ ಎಂಬಾತ ಕಿರುಕುಳ ನೀಡಿ, ಗನ್ ತೋರಿಸಿ ಬಲವಂತವಾಗಿ ಮದುವೆಯಾಗಿದ್ದನು. ಈ ಸಂಬಂಧ ಪತಿಯ ವಿರುದ್ಧ ಉಜ್ಮಾ ಇಸ್ಲಾಮಾಬಾದ್ ಹೈ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

ಪತಿ ತಾಹೀರ್ ಬಲವಂತವಾಗಿ ಮದುವೆ ಮಾಡಿಕೊಂಡಿದ್ದಾನೆ. ಅಲ್ಲದೇ ದಾಖಲೆಗಳನ್ನು ಆತ ಕಸಿದುಕೊಂಡಿದ್ದಾನೆ. ಹೀಗಾಗಿ ನನಗೆ ಭಾರತಕ್ಕೆ ತೆರಳಲು ರಕ್ಷಣೆ ಕೊಡಬೇಕು ಹಾಗೂ ತಾಯ್ನಡಿಗೆ ಹಿಂದಿರುಗಲು ನಕಲು ಪ್ರತಿಗಳನ್ನು ಒದಗಿಸಿಕೊಡಬೇಕೆಂದು ಮೇ 12ಕ್ಕೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಸ್ವೀಕರಿಸಿದ ಇಸ್ಲಾಮಾಬಾದ್ ಹೈಕೋರ್ಟ್ ನ್ಯಾಯಾಧೀಶ ಮೋಶಿನ್ ಅಕ್ತಾರ್ ಕಯಾನಿ ಅವರಿದ್ದ ಪೀಠ, ಪ್ರಕರಣವನ್ನು ಕೈಗೆತ್ತಿಕೊಂಡು ಬುಧವಾರ ಉಜ್ಮಾ ಅವರಿಗೆ ಭಾರತಕ್ಕೆ ಮರಳಲು ಅವಕಾಶ ನೀಡಿತ್ತು. ಅಲ್ಲದೇ ಪೊಲೀಸರು ಕೂಡ ವಾಘಾ ಗಡಿಯವರೆಗೆ ಆಕೆಯ ಜೊತೆಗಿದ್ದು ರಕ್ಷಣೆ ಕೊಡಬೇಕೆಂದು ಕೋರ್ಟ್ ಆದೇಶ ಮಾಡಿತ್ತು. ನ್ಯಾಯಾಲಯದ ಅನುಮತಿಯಂತೆ ಉಜ್ಮಾ ಇಂದು ಬಿಗಿ ಭದ್ರತೆಯೊಂದಿಗೆ ವಾಘಾ ಗಡಿ ದಾಟಿ ಭಾರತದ ಮಣ್ಣಿಗೆ ಕೈ ಮುಗಿದು ತಾಯ್ನಾಡಿನತ್ತ ಪ್ರಯಾಣ ಬೆಳೆಸಿದ್ದಾರೆ.

ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಉಜ್ಮಾ ಅವರನ್ನು ಭಾರತಕ್ಕೆ ಸ್ವಾಗತಿಸಿದ್ದಾರೆ. ಅಲ್ಲದೆ, ಭಾರತದ ಮಗಳು ಎಂದು ಕರೆದಿದ್ದಾರೆ. ಪಾಕಿಸ್ತಾನದಲ್ಲಿ ಇಷ್ಟೆಲ್ಲಾ ಸಂಕಷ್ಟಗಳನ್ನು ಅನುಭವಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆಂದು ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಈ ಕುರಿತು ಉಜ್ಮಾ ಸಹೋದರ ವಾಸಿಮ್ ಅಹಮದ್ ಮಾಧ್ಯಮಗಳೊಂದಿಗೆ ಮಾತನಾಡಿ, `ಸಹೋದರಿ ಸೇಫ್ ಆಗಿ ತಾಯ್ನಾಡಿಗೆ ಮರಳುತ್ತಿರುವುದು ಸಂತಸ ತಂದಿದೆ. ಆದ್ರೆ ವಿಮಾನ ವಿಳಂಬಗೊಂಡಿರುವುದರಿಂದ ಆಕೆ ದೆಹಲಿಗೆ ಯಾವಾಗ ಬರುತ್ತಾಳೆ ಅಂತಾ ಗೊತ್ತಿಲ್ಲ. ಇನ್ನು ಆಕೆಯ ಹಿಂದಿರುಗುವಿಕೆಗೆ ಸಹಕರಿಸಿದ ಭಾರತ ಸರ್ಕಾರ ಹಾಗೂ ಆಕೆ ಪಾಕಿಸ್ತಾನದಲ್ಲಿದ್ದ ಸಂದರ್ಭದಲ್ಲಿ ಆಕೆಯೊಂದಿಗೆ ಫೋನ್ ಮೂಲಕ ನಿರಂತರ ಸಂಪರ್ಕ ಹೊಂದಿದ್ದ ವಿದೇಶಾಂಗ ಸಚಿವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

 

 


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>