Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80355

ವಿಡಿಯೋ: ಹಾಡಹಗಲೇ ವ್ಯಕ್ತಿಯನ್ನ ಅಟ್ಟಾಡಿಸಿ ಕುರಿ ಕಡಿಯುವಂತೆ ಕೊಚ್ಚಿ ಕೊಚ್ಚಿ ಕೊಂದ್ರು

$
0
0

ಹೈದರಾಬಾದ್: ಹಾಡಹಗಲೇ ವ್ಯಕ್ತಿಯೊಬ್ಬರನ್ನ ನಾಲ್ವರು ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಇಂದು ಬೆಳಗ್ಗೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಕಡಪಾ ಜಿಲ್ಲೆಯ ಪ್ರೊದ್ದುಟೂರಿನ ಕೋರ್ಟ್ ವೊಂದರ ಬಳಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಕೊಲೆಗೀಡಾದ ವ್ಯಕ್ತಿಯನ್ನು 32 ವರ್ಷದ ಮಾರುತಿ ರೆಡ್ಡಿ ಎಂದು ಗುರುತಿಸಲಾಗಿದೆ. ಮಾರುತಿ ಅವರು ಪ್ರಕರಣವೊಂದರ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಕೊಲೆ ನಡೆದಿದೆ.

ಆಟೋ ರಿಕ್ಷಾದಿಂದ ಕೆಳಗಿಳಿಯುತ್ತಿದ್ದಂತೆ ಮಾರುತಿ ಅವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಮಾರುತಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದರಾದ್ರೂ ರೋಡ್ ಡಿವೈಡರ್ ಬಳಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಎಲ್ಲರೂ ನೋಡುತ್ತಿದ್ದಂತೆ ಮಚ್ಚಿನಿಂದ ಅನೇಕ ಬಾರಿ ಕೊಚ್ಚಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಕೆಲ ಸಾರ್ವಜನಿಕರು ಇದನ್ನ ನೋಡಿ ಭಯಗೊಂಡು ಓಡಿದ್ರೆ ಇನ್ನೂ ಕೆಲವರು ಕಣ್ಣ ಮುಂದೆಯೇ ವ್ಯಕ್ತಿ ಕೊಲೆಯಾಗೋದನ್ನ ನಿಂತು ನೋಡಿದ್ದಾರೆ. ಈ ಪ್ರದೇಶದ ಸಿಸಿಟಿವಿ ಕ್ಯಾಮೆರಾದಲ್ಲೂ ಕೂಡ ಘಟನೆಯ ದೃಶ್ಯ ಸೆರೆಯಾಗಿದೆ.

ಈ ಭಯಾನಕ ಹತ್ಯೆಗೆ ಅನೈತಿಕ ಸಂಬಂಧವೇ ಕಾರಣ ಎನ್ನಲಾಗ್ತಿದೆ. ಮಾರುತಿ ಅವರನ್ನ ಕೊಲೆಗೈದ ನಾಲ್ವರಲ್ಲಿ ಒಬ್ಬರು ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಸಂಬಂಧಿ ಎಂದು ವರದಿಯಾಗಿದೆ.

ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.


Viewing all articles
Browse latest Browse all 80355

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>