Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ಮೊದಲು ಕಾಳ್ ಧನ್, ಕಾಳ್ ಧನ್ ಅಂತಿದ್ರು, ಈಗ ಜನ್ ಧನ್, ಡಿಜಿ ಜನ್ ಅಂತಿದ್ದಾರೆ: ಮೋದಿ

$
0
0

ಗುವಾಹಟಿ:“ಸರ್ಕಾರ ಇದೆಯೋ ಇಲ್ವೋ ಎನ್ನುವ ಕಾಲವೊಂದಿತ್ತು. ಆ ವೇಳೆ ಜನರು ಕಾಳ್ ಧನ್, ಕಾಳ್ ಧನ್ ಅನ್ನುತಿದ್ದರು. ಆದರೆ ಈಗ ಜನ ಜನ್ ಧನ್, ಡಿಜಿ ಧನ್ ಅನ್ನುತ್ತಿದ್ದಾರೆ”

– ಪ್ರಧಾನಿ ಮೋದಿ ಅವರು ತಮ್ಮ ಮೂರು ವರ್ಷದ ಅವಧಿಯಲ್ಲಿ ಕಪ್ಪು ಹಣವನ್ನು ಮಟ್ಟ ಹಾಕಿ ಹೊಸ ಯೋಜನೆಗಳನ್ನು ಜನರು ಹೇಗೆ ಹೇಳುತ್ತಿದ್ದಾರೆ ಎನ್ನುವುದನ್ನು ವಿವರಿಸಲು ಹೇಳಿದ್ದು ಹೀಗೆ.

ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಸ್ಸಾಂನ ಗುವಾಹಟಿಯಲ್ಲಿ ಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ನಾವು ಬಹಳಷ್ಟು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡೆವು. ಈ ಕಠಿಣ ನಿರ್ಧಾರವನ್ನು ವಿರೋಧಿಸದೇ ನೀವು ನಮ್ಮನ್ನು ಬೆಂಬಲಿಸಿದ್ದೀರಿ. ನಿಮ್ಮ ಈ ಬೆಂಬಲದಿಂದಾಗಿ ನಮಗೆ ಕೆಲಸ ಮಾಡಲು ಶಕ್ತಿ ಬಂದಿದೆ. ನನ್ನ ವಿಶ್ವಾಸಕ್ಕೆ ಹೊಸ ಬಲ ಕೊಟ್ಟಿದೆ ಎಂದರು.

ದೇಶದ ಎಲ್ಲ ಭಾಗಗಳನ್ನು ನಾವು ಗಮನಿಸುತ್ತೇವೆ ಎನ್ನುವುದನ್ನು ತಿಳಿಸಲು, ದೇಶದ ಮೂಲೆ ಮೂಲೆಯೂ ನಮಗೆ ದೆಹಲಿ ಎಂದ ಪ್ರಧಾನಿ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ. ಸ್ವತಃ ಮಳೆರಾಯನೂ ನಮಗೆ ಆಶೀರ್ವದಿಸಿದ್ದಾನೆ ಎಂದರು.

2022ರ ವೇಳೆಗೆ ಸಂಪದ ಯೋಜನೆಯ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸುತ್ತೇವೆ. ಹಿಂದುಳಿದ ವರ್ಗಗಳ ಕೆನೆಪದರ ಮಿತಿ 8 ಲಕ್ಷಕ್ಕೆ ಹೆಚ್ಚಿಸುತ್ತೇನೆ. ನಾನು ಸಣ್ಣ ವ್ಯಕ್ತಿ. 1 ಕೋಟಿಗೂ ಅಧಿಕ ಕುಟುಂಬಗಳು ಗ್ಯಾಸ್ ಸಬ್ಸಿಡಿ ತ್ಯಾಗ ಮಾಡಿದವು. ಸಂಕಷ್ಟಗಳ ನಡುವೆಯೇ ಹೆಗಲು ಕೊಟ್ಟಿದ್ದೀರಿ. ಪ್ರಾಮಾಣಿಕರಿಗೆ, ಬಡವರಿಗೆ ಬದುಕುವ ಸಮಯ ಬಂದಿದೆ ಎಂದು ಹೇಳಿದರು.

3 ವರ್ಷದಲ್ಲಿ ಒಂದು ದಿನವೂ ಸುಮ್ಮನಿರಲಿಲ್ಲ ನಾನು ತಿಂಗಳುಗಟ್ಟಲೆ ಹೊಸ ಹೊಸ ಕೆಲಸಗಳ ಬಗ್ಗೆ ಮಾತನಾಡಬಲ್ಲೆ. ನಮಗೆ ಕೆಲಸ ಮಾಡುವ ವಿಶ್ವಾಸ ಹೆಚ್ಚುತ್ತಿದೆ. 2022ರಲ್ಲಿ ಭಾರತ 75ನೇ ವರ್ಷ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಆಚರಿಸಲಿದೆ. ಈ ವೇಳೆ ಭಾರತ ಬದಲಾಗಬೇಕು. ನವ ಭಾರತಕ್ಕಾಗಿ ನಾವೆಲ್ಲ ಒಂದಾಗಿ ಕೆಲಸ ಮಾಡೋಣ ಎಂದು ಜನರಲ್ಲಿ ಮೋದಿ ಮನವಿ ಮಾಡಿದರು.

ಇದನ್ನೂ ಓದಿ: ದೇಶದ ಅತಿ ಉದ್ದವಾದ ಸೇತುವೆ ಉದ್ಘಾಟಿಸಿ, ಯುಪಿಎ ಸರ್ಕಾರಕ್ಕೆ ಮೋದಿ ಟಾಂಗ್ ನೀಡಿದ್ದು ಹೀಗೆ


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>