Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80365

ಕಾಂಗ್ರೆಸ್‍ಗೆ ಭಾರೀ ಮುಖಭಂಗ: ಪರಿಷತ್ ಸಭಾಪತಿಯಾಗಿ ಶಂಕರಮೂರ್ತಿ ಮುಂದುವರಿಕೆ

$
0
0

ಬೆಂಗಳೂರು: ಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ ಅವರನ್ನು ಪದಚ್ಯುತಿಗೊಳಿಸಲು ಮುಂದಾಗಿದ್ದ ಕಾಂಗ್ರೆಸ್‍ಗೆ ಭಾರೀ ಮುಖಭಂಗವಾಗಿದೆ.

ನಿರ್ಣಯದ ಪರವಾಗಿ 36 ಮತಗಳು ಬಿದ್ದಿದ್ದರೆ, ನಿರ್ಣಯದ ವಿರುದ್ಧವಾಗಿ 37 ಮತಗಳು ಬಿದ್ದ ಪರಿಣಾಮ ಸಭಾಪತಿ ವಿರುದ್ಧ ಕಾಂಗ್ರೆಸ್‍ನ ಅವಿಶ್ವಾಸ ನಿರ್ಣಯ ತಿರಸ್ಕೃತವಾಗಿದೆ. ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಜೆಡಿಎಸ್ ಬೆಂಬಲಿಸದ ಕಾರಣ ಶಂಕರಮೂರ್ತಿ ಸಭಾಪತಿಗಳಾಗಿ ಮುಂದುವರೆಯಲಿದ್ದಾರೆ.

ಬಿಜೆಪಿಗೆ ಬೆಂಬಲ ಘೋಷಿಸಿ ಮಾತಾಡಿದ ಜೆಡಿಎಸ್ ರಾಜ್ಯಧ್ಯಕ್ಷ ಕುಮಾರಸ್ವಾಮಿ, ಜೆಡಿಎಸ್ ಪಕ್ಷವನ್ನು ಕಾಂಗ್ರೆಸ್ ಪಕ್ಷದವರು ಹುಡುಗಾಟ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ವಾರದ ಮೊದಲೇ ನಮ್ಮ ಜೊತೆ ಚರ್ಚೆ ಮಾಡಿದ್ದರೆ ಒಳ್ಳೆಯದಿತ್ತು. ಅದು ಬಿಟ್ಟು ಈಗ ಹೇಳಿ ಗೊಂದಲ ಹುಟ್ಟು ಹಾಕುವ ಪ್ರಯತ್ನ ಮಾಡಿದ್ದಾರೆ. ಬಸವರಾಜ್ ಹೊರಟ್ಟಿಗೆ 2 ತಿಂಗಳ ನಂತರ ಸಭಾಪತಿ ಸ್ಥಾನ ಕೊಡುವ ವಿಚಾರವನ್ನು ನಾವು ಪ್ರಸ್ತಾಪ ಮಾಡಿದ್ದೇವೆ. ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೇವೆ. ಜೊತೆಗೆ ಈ ಮೈತ್ರಿ ಸಭಾಪತಿ ವಿಚಾರಕ್ಕೆ ಮಾತ್ರ ಸೀಮಿತ ಅಂತಾನು ಸ್ಪಷ್ಟಪಡಿಸಿದರು.

ಯಾವುದೇ ಆರೋಪ ಇಲ್ಲದೇ ಇದ್ದರೂ ಆಡಳಿತ ಪಕ್ಷದವರು ಪರಿಷತ್ ಸಭಾಪತಿ ಆಗಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಶಂಕರಮೂರ್ತಿ ಅವರನ್ನು ಪದಚ್ಯುತಿಗೊಳಿಸಲು ಮುಂದಾಗಿದ್ದರು.

 

 


Viewing all articles
Browse latest Browse all 80365

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ