Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80355

ವೃದ್ಧೆಯ ಕೊಲೆ ಕೇಸ್ ಆರೋಪಿ ಬಂಧನ: ಕೊಲೆಗಾರನ ಸುಳಿವು ನೀಡಿತ್ತು ಚಪ್ಪಲಿ

$
0
0

ಬೆಂಗಳೂರು: ನಗರದ ಅಡುಗೋಡಿಯಲ್ಲಿ ನಡೆದಿದ್ದ ವೃದ್ಧೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

22 ವರ್ಷ ವಯಸ್ಸಿನ ಸೈಯದ್ ನದೀಮ್ ಬಂಧಿತ ಆರೋಪಿ. ಈತ 16ನೇ ತಾರೀಖಿನಂದು ವೃದ್ಧೆ ಗಜಲಕ್ಷ್ಮಿ ಎಂಬವರನ್ನ ಕೊಂದು ಚಿನ್ನಾಭರಣ ದೋಚಿದ್ದ. ವಿವೇಕನಗರದ ನೀಲಸಂದ್ರದಲ್ಲಿ ಈ ಘಟನೆ ನಡೆದಿತ್ತು. 75 ವರ್ಷದ ಗಜಲಕ್ಷ್ಮೀ ಮನೆಯಲ್ಲಿ ಮಲಗಿದ್ದ ವೇಳೆ ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕೊಲೆಗಾರನ ಪತ್ತೆಗೆ ಬಲೆ ಬೀಸಿದ್ದರು.

ಚಪ್ಪಲಿ ನೀಡಿತ್ತು ಕೊಲೆಗಾರನ ಸುಳಿವು: ಈ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಸುಳಿವು ನೀಡಿದ್ದು ಚಪ್ಪಲಿ. ಚಪ್ಪಲಿಯಲ್ಲಿದ್ದ ತೂತುಗಳಿಂದ ಪೊಲೀಸರು ಕೊಲೆಗಾರನನ್ನ ಪತ್ತೆ ಹಚ್ಚಿದ್ದಾರೆ. ಆರೋಪಿ ಕೊಲೆ ಮಾಡಿದ ಬಳಿಕ ಚಪ್ಪಲಿಯನ್ನು ಅಲ್ಲಿಯೇ ಬಿಟ್ಟು ಹೋಗಿದ್ದ. ಚಪ್ಪಲಿಯನ್ನು ಪರಿಶೀಲಿಸಿದ ಪೊಲೀಸರು ಚಪ್ಪಲಿಯಲ್ಲಿರೋ ರಂಧ್ರ ನೋಡಿದ್ರು. ವೆಲ್ಡಿಂಗ್ ಮಾಡೋರ ಚಪ್ಪಲಿಯಲ್ಲಿ ಮಾತ್ರ ಈ ರೀತಿಯ ರಂಧ್ರಗಳಿರುತ್ತೆ ಎಂದು ತಿಳಿದು ಪರಿಶೀಲನೆ ನಡೆಸಿದ್ದರು.

ಬಳಿಕ ಸೈಯದ್‍ನನ್ನು ಪತ್ತೆ ಹಚ್ಚಿದ್ರು. ಸೈಯದ್ ಕೂಡ ವೆಲ್ಡಿಂಗ್ ಮಾಡೋ ಜಾಗದಲ್ಲಿ ಕೆಲಸ ಮಾಡ್ತಿದ್ದ. ಇದೀಗ ಈತನನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.


Viewing all articles
Browse latest Browse all 80355

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>