Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80385

ಆಧಾರ್ ಕಾರ್ಡ್‍ಗಾಗಿ ತಾಲೂಕು ಆಫೀಸಿಗೆ ಮಹಿಳೆ ತೆವಳಿಕೊಂಡೇ ಹೋದ ಮನಕಲಕುವ ವಿಡಿಯೋ ನೋಡಿ

$
0
0

ದಾವಣಗೆರೆ: ಮಹಿಳೆಯೊಬ್ಬಳು ಆಧಾರ್ ಕಾರ್ಡ್ ಗಾಗಿ ತಾಲೂಕು ಅಫೀಸಿಗೆ ತೆವಳಿಕೊಂಡೇ ಹೋದ ಮನ ಕಲುಕುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕು ಕಛೇರಿಯಲ್ಲಿ ನಡೆದಿದೆ.

ಹರಪ್ಪನಹಳ್ಳಿ ತಾಲ್ಲೂಕಿನ ಗೌರಮ್ಮ ಅಂಗವಿಕಲೆಯಾಗಿದ್ದು, ಅಂಗವಿಕಲರ ವೇತನಕ್ಕೆ ಆಧಾರ್ ಕಡ್ಡಾಯ ಮಾಡಿರುವುದರಿಂದ ಐದು ತಿಂಗಳಿನಿಂದ ತಾಲೂಕು ಕಛೇರಿಗೆ ಅಲೆದಾಡುತ್ತಿದ್ದಾರೆ. ಇದ್ದ ಊರಿನಲ್ಲಿ ಆಧಾರ್ ಕಾರ್ಡ್ ಮಾಡಿಸಲು ಮಹಿಳೆಯ ಕೈ ಬೆರಳುಗಳು ಸರಿ ಇಲ್ಲದ ಕಾರಣ ಹರಪ್ಪನಹಳ್ಳಿ ತಾಲೂಕು ಕಛೇರಿಗೆ ಹೋಗುವಂತೆ ಹೇಳಿದ್ದಾರೆ.

ಆದ್ರೆ ಮಹಿಳೆ ಮಾತ್ರ ಆಧಾರ್ ಕಾರ್ಡ್ ಮಾಡಿಸಲು ತೆವಳುತ್ತಾ ತಾಲೂಕು ಕಚೇರಿಗೆ ಅಲೆದಾಟ ನಡೆಸಿದ್ರೂ ಅಧಿಕಾರಿಗಳಿಗೆ ಮಾತ್ರ ಕಿಂಚಿತ್ತೂ ಕರುಣೆ ಬಂದಿಲ್ಲ. ಪ್ರತಿನಿತ್ಯ ಈ ರೀತಿ ಬಂದು ಹೋಗುತ್ತಿರುವುದನ್ನು ಅಲ್ಲಿನ ಸ್ಥಳೀಯರು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸದ್ಯ ಅಧಿಕಾರಿಗಳು ಆಧಾರ್ ಕಾರ್ಡ್ ಮಾಡಿಕೊಟ್ಟಿದ್ದಾರೆ. ಒಬ್ಬಂಟಿಯಾಗಿಯೇ ಅಂಗವಿಕಲರ ವೇತನವನ್ನೇ ನಂಬಿ ಜೀವನ ನಡೆಸುತ್ತಿರೋ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮಹಿಳೆ ತೆವಳಿಕೊಂಡು ಹೋಗುತ್ತಿರುವ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದು ಮಾಧ್ಯಮಗಳಿಗೆ ನೀಡಿದ್ದಾರೆ.


Viewing all articles
Browse latest Browse all 80385

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>