Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80310

ಆತಂಕ ಬೇಡ, ಇವತ್ತು ಆಧಾರ್ ನಂಬರ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಲ್ಲ

$
0
0

ನವದೆಹಲಿ: ಇವತ್ತು ನಿಮ್ಮ ಪ್ಯಾನ್‍ಕಾರ್ಡ್‍ಗೆ ಆಧಾರ್ ನಂಬರ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತೆ ಅನ್ನೋ ಆತಂಕ ಬೇಡ.

ಜುಲೈ 1 ರಿಂದ ಇನ್‍ಕಮ್ ಟ್ಯಾಕ್ಸ್ ರಿಟರ್ನ್ಸ್ ಫೈಲಿಂಗ್‍ಗೆ ಹಾಗೂ ಹೊಸ ಪ್ಯಾನ್ ಕಾರ್ಡ್‍ಗಾಗಿ ಆಧಾರ್ ಕಾರ್ಡ್ ಕಡ್ಡಾಯ ಎಂದು ಈಗಾಗಲೇ ಸರ್ಕರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಆಧಾರ್ ಹಾಗೂ ಪ್ಯಾನ್ ಕಾರ್ಡ್ ಲಿಂಕಿಂಗ್ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲ ಹಾಗೂ ಪ್ರಶ್ನೆಗಳು ಮೂಡಿವೆ. ಈ ಹಿನ್ನೆಲೆಯಲ್ಲಿ ಹಿರಿಯ ತೆರಿಗೆ ಅಧಿಕಾರಿಯೊಬ್ಬರು ಜನರ ಎರಡು ಪ್ರಮುಖ ಗೊಂದಲಗಳಿಗೆ ಉತ್ತರ ನೀಡಿದ್ದಾರೆ.

ಆಧಾರ್ ಸಂಖ್ಯೆ ಜೊತೆ ಲಿಂಕ್ ಮಾಡದ ಪ್ಯಾನ್ ಕಾರ್ಡ್ ಜುಲೈ 1ರಿಂದ ಖಂಡಿತವಾಗಿಯೂ ಅಮಾನ್ಯವಾಗುವುದಿಲ್ಲ. ಆದ್ರೆ ಯಾವುದೇ ವ್ಯಕ್ತಿ ತನ್ನ ಇನ್‍ಕಮ್ ಟ್ಯಾಕ್ಸ್ ರಿಟರ್ನ್ಸ್ ಇ-ಫೈಲ್ ಮಾಡಬಯಸಿದ್ರೆ ಇನ್‍ಕಮ್ ಟ್ಯಾಕ್ಸ್ ರಿಟರ್ನ್ಸ್ ನಲ್ಲಿ ಆಧಾರ್ ನಂಬರ್ ನಮೂದಿಸಿರಬೇಕು ಅಥವಾ ಇಲಾಖೆಯ ಇ ಫೈಲಿಂಗ್ ಪೋರ್ಟಲ್‍ನಲ್ಲಿ ಲಿಂಕ್ ಮಾಡಿರಬೇಕು. ಒಂದು ವೇಳೆ ಆಧಾರ್ ಮಾಹಿತಿಯನ್ನು ಪ್ಯಾನ್ ಕಾರ್ಡ್‍ನೊಂದಿಗೆ ಲಿಂಕ್ ಮಾಡದಿದ್ದರೆ ಅಥವಾ ಇನ್‍ಕಮ್ ಟ್ಯಾಕ್ಸ್ ರಿಟರ್ನ್ಸ್ ನಲ್ಲಿ ನಮೂದಿಸದಿದ್ದರೆ ಅಂತಹ ವ್ಯಕ್ತಿ ಇ-ಫೈಲ್ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಪ್ಯಾನ್ ಕಾರ್ಡ್‍ಗೆ ಆಧಾರ್ ನಂಬರ್ ಲಿಂಕ್ ಮಾಡಲು ಇಂದು ಅಂದ್ರೆ ಜೂನ್ 30 ಕೊನೆಯ ದಿನಾಂಕವಲ್ಲ. ಜುಲೈ 1ರಿಂದ ಪ್ಯಾನ್ ಕಾರ್ಡ್‍ಗೆ ಆಧಾರ್ ಸಂಯೋಜನೆ ಕಡ್ಡಾಯವಷ್ಟೆ. ಪ್ಯಾನ್ ಕಾರ್ಡ್ ಅಮಾನ್ಯವಾಗುವ ಕೊನೆಯ ದಿನಾಂಕವನ್ನು ಸರ್ಕಾರ ಇನ್ನೂ ಪ್ರಕಟಿಸಿಲ್ಲ ಎಂದು ರಾಷ್ಟ್ರೀಯ ಪತ್ರಿಕೆಗಳಲ್ಲಿ ವರದಿಯಾಗಿದೆ.

ಹೀಗಾಗಿ ಇಂದು ನೀವು ಪ್ಯಾನ್ ಕಾರ್ಡ್ ಜೊತೆ ಆಧಾರ್ ನಂಬರ್ ಲಿಂಕ್ ಮಾಡದಿದ್ರೆ ನಿಮ್ಮ ಕಾರ್ಡ್ ಅಮಾನ್ಯವಾಗುವುದಿಲ್ಲ. ಜುಲೈ 1ರೊಳಗೆ ಪ್ಯಾನ್ ಕಾರ್ಡ್ ಜೊತೆ ಆಧಾರ್ ಸಂಖ್ಯೆ ಸಂಯೋಜನೆ ಮಾಡದವರು ಇ-ಐಟಿಆರ್(ಇನ್‍ಕಮ್ ಟ್ಯಾಕ್ಸ್ ರಿಟರ್ನ್ಸ್)ನಲ್ಲಿ ಆಧಾರ್ ಸಂಖ್ಯೆಯನ್ನ ನಮೂದಿಸಬಹುದು. ಇದು ಎರಡೂ ನಂಬರ್‍ಗಳ ಸಂಯೋಜನೆಗೆ ಮಾನ್ಯವೆಂದು ಪರಿಗಣಿಸಲ್ಪಡುತ್ತದೆ ಎಂದು ವರದಿಯಾಗಿದೆ.

ವಾರ್ಷಿಕ 5 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿರುವ ಪ್ರತಿಯೊಬ್ಬರೂ ಇನ್‍ಕಮ್ ಟ್ಯಾಕ್ಸ್ ರಿಟರ್ನ್ಸ್ ನ ಇ- ಫೈಲಿಂಗ್ ಮಾಡುವುದು ಕಡ್ಡಾಯವಾಗಿದೆ. ಅಲ್ಲದೆ ಜುಲೈ 1 ರಿಂದ ಪಾನ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸಲು ಆಧಾರ್ ಕಡ್ಡಾಯ.

ಇದನ್ನೂ ಓದಿ: ಜಸ್ಟ್ 1 ನಿಮಿಷದಲ್ಲಿ ಪಾನ್ ಕಾರ್ಡ್ ಗೆ ಆಧಾರ್ ನಂಬರ್ ಸೇರಿಸುವುದು ಹೇಗೆ?


Viewing all articles
Browse latest Browse all 80310

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>