Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80385

ಸಲ್ಮಾನ್ ಖಾನ್ ತನ್ನ 20 ಬಾಡಿಗಾರ್ಡ್‍ಗಳನ್ನ ಒಮ್ಮೆಲೆ ಕೆಲಸದಿಂದ ತೆಗೆದಿದ್ದರ ಹಿಂದಿನ ಕಾರಣ ಇಲ್ಲಿದೆ

$
0
0

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ತನ್ನ ಕೆಲವು ಬಾಡಿಗಾರ್ಡ್‍ಗಳನ್ನ ಕೆಲಸದಿಂದ ಕಿತ್ತು ಹಾಕಿದ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ನಟ ಸಲ್ಮಾನ್ ಎಲ್ಲಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದ ಕಾರಣ ಅವರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಹೇಳಲಾಗಿತ್ತು. ಆದ್ರೆ ಇದರ ಹಿಂದಿನ ನಿಜವಾದ ಕಾರಣ ಈಗ ಬಯಲಾಗಿದೆ.

ಕೆಲಸದಿಂದ ತೆಗೆಯಲಾದ ಸೆಕ್ಯೂರಿಟಿ ಗಾರ್ಡ್‍ವೊಬ್ಬರು ಪತ್ರಿಕೆಯೊಂದಿಗೆ ಮಾತನಾಡಿ ಸತ್ಯಾಂಶವನ್ನ ಬಿಚ್ಚಿಟ್ಟಿದ್ದಾರೆ. ಸಲ್ಮಾನ್ ಖಾನ್ ತುಂಬಾ ಮೂಡಿ. ಇತ್ತೀಚೆಗೆ ಅವರು ಕೋಪದಲ್ಲಿ ಒಬ್ಬರಲ್ಲ, 20 ಗಾರ್ಡ್‍ಗಳನ್ನು ಕಾರಣವಿಲ್ಲದೆ ಕೆಲಸದಿಂದ ತೆಗೆದರು ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರ ವೇಳೆ, ಸಲ್ಮಾನ್ ಖಾನ್ ಅವರ ಮುಂಬೈ ಅತಿಥಿಗಳ ಭದ್ರತೆಗೆ ಹಲವು ಗಾರ್ಡ್‍ಗಳನ್ನ ನಿಯೋಜಿಸಲಾಗಿತ್ತು. ಅವರಲ್ಲಿ ಒಬ್ಬ ಅತಿಥಿ ತನಗೆ ಸರಿಯಾಗಿ ಸ್ವಾಗತ ಮಾಡಲಿಲ್ಲ ಎಂದು ಗಾರ್ಡ್‍ವೊಬ್ಬನ ಜೊತೆ ವಾದಕ್ಕಿಳಿದರು. ಈ ವೇಳೆ ಗಾರ್ಡ್, ನಾನು ಸೆಕ್ಯೂರಿಟಿ ಗಾರ್ಡ್ ಆಗಿ ನನ್ನ ಕರ್ತವ್ಯವನ್ನ ಸರಿಯಾಗಿ ಮಾಡಿದ್ದೇನೆ ಎಂದಾಗ ಆ ಅತಿಥಿ ಕೋಪಗೊಂಡು ಕೆನ್ನೆಗೆ ಬಾರಿಸಿದ್ರು. ಗಾರ್ಡ್ ಕೂಡ ತಿರುಗಿಸಿ ಅವರ ಕೆನ್ನೆಗೆ ಬಾರಿಸಿದ ಎಂದು ಹೇಳಿದ್ದಾರೆ.

ಈ ಘಟನೆಯ ಮರುದಿನ ನಿರೀಕ್ಷೆಯಂತೆ ಸಲ್ಮಾನ್ ಖಾನ್ ಎಲ್ಲಾ ಬಾಡಿಗಾರ್ಡ್‍ಗಳನ್ನ ಕರೆಸಿದ್ರು. ಒಂದೇ ಬಾರಿಗೆ ಎಲ್ಲಾ 20 ಬಾಡಿಗಾರ್ಡ್‍ಗಳನ್ನು ಕೆಲಸದಿಂದ ತೆಗೆಯಲು ನಿರ್ಧರಿಸಿದ್ರು ಎಂದಿದ್ದಾರೆ.

ಕೆಲಸದಿಂದ ತೆಗೆಯಲ್ಪಟ್ಟ ಮತ್ತೊಬ್ಬ ಸೆಕ್ಯೂರಿಟಿ ಗಾರ್ಡ್ ಕೂಡ ಈ ಬಗ್ಗೆ ಹೇಳಿಕೆ ನೀಡಿದ್ದು, ಹೌದು, ಇದು ನಿಜ. ತಪ್ಪು ಮಾಡಿದ ಗಾರ್ಡ್‍ನನ್ನು ಬೇಕಾದ್ರೆ ತೆಗೆಯಲಿ. ಆದ್ರೆ ಅವನಿಂದ ಬೇರೆ ಎಲ್ಲರೂ ಯಾಕೆ ಕೆಲಸ ಕಳೆದುಕೊಳ್ಬೇಕು ಎಂದು ನಮ್ಮಲ್ಲಿ ಒಬ್ಬರು ಭಾಯ್‍ಗೆ ಹೇಳುವ ಧೈರ್ಯ ತೋರಿದ್ದಕ್ಕೆ ಅವರು “ನೀನು ಜಾಸ್ತಿ ಮಾತಾಡ್ತಿದ್ದೀಯಾ” ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.


Viewing all articles
Browse latest Browse all 80385

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>