Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80355

ನರ್ಸರಿಯಿಂದ ಉಚಿತ ಸಸಿ ಹಂಚಿಕೆ- ಸ್ವಗ್ರಾಮದ ಶಾಲೆಗೆ ಸ್ವಂತ ಹಣದಿಂದ ಕಾಯಕಲ್ಪ

$
0
0

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಯಮಸಂಧಿ ಎಂಬ ಗ್ರಾಮದ ಯುವಕ ಸುಪ್ರೀತ್ ಕುಮಾರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಸುಪ್ರೀತ್ ಕುಮಾರ್ ಪರಿಸರದ ಮೇಲೆ ಅಪಾರ ಕಾಳಜಿ ಹೊಂದಿದ್ದು 50 ಸಾವಿರಕ್ಕೂ ಹೆಚ್ಚಿನ ಗಿಡಗಳನ್ನ ನೆಟ್ಟು ಸಂರಕ್ಷಣೆ ಮಾಡ್ತಿದ್ದಾರೆ.

ತಮ್ಮ ಜಾಗದಲ್ಲಿಯೇ ಗಿಡಗಳ ನರ್ಸರಿ ಮಾಡಿದ್ದಾರೆ. ಸಾವಯವ ಪದ್ಧತಿಯ ನರ್ಸರಿಯಲ್ಲಿನ ಗಿಡಗಳನ್ನ ತಮ್ಮ ವಾಹನದಲ್ಲೇ ಶಾಲೆಗಳಿಗೆ ಸುತ್ತಿ ಶಾಲಾ ಮಕ್ಕಳಿಗೆ ಉಚಿತವಾಗಿ ನೀಡ್ತಿದ್ದಾರೆ. ಸ್ವಗ್ರಾಮ ಯಮಸಂಧಿಯಿಂದ ಬೇಲೂರುವರೆಗಿನ 25 ಕಿಲೋಮೀಟರ್ ದೂರದವರೆಗೆ ಗಿಡ ಬೆಳೆಸುವ ಗುರಿಯನ್ನು ಹೊಂದಿದ್ದಾರೆ.

ಪರಿಸರ ಜಾಗೃತಿ ಮಾತ್ರವಲ್ಲದೆ ಗ್ರಾಮದಲ್ಲಿ ಮುಚ್ಚುವ ಸ್ಥಿತಿಗೆ ಬಂದ ಶಾಲೆಯನ್ನು ಉಳಿಸಿಕೊಳ್ಳುವುದಕ್ಕೆ ಸಾಕಷ್ಟು ಶ್ರಮವಹಿಸಿದ್ದು, ಇಬ್ಬರು ಶಿಕ್ಷಕಿಯರ ಕೊರತೆ ಇದ್ದರೂ ಸಹ ಖಾಸಗಿಯಾಗಿ ಶಿಕ್ಷಕರನ್ನ ನೇಮಿಸಿಕೊಂಡು ತಾವೇ ಸಂಬಳ ನೀಡ್ತಿದ್ದಾರೆ. ಶಾಲಾ ಮಕ್ಕಳ ಸಂಖ್ಯೆ 7 ರಿಂದ ಈಗ 40 ಆಗಿದೆ. ಸುತ್ತಲ ಗ್ರಾಮಗಳಲ್ಲಿರುವ ಶಾಲಾ ಮಕ್ಕಳನ್ನು ಕರೆತರಲು ವಾಹನ ವ್ಯವಸ್ಥೆ ಕಲ್ಪಿಸಿದ್ದಾರೆ. ಜೊತೆಗೆ ಶಾಲೆಯಲ್ಲಿ ಕ್ರೀಡಾ ಶಿಕ್ಷಕರಿಲ್ಲದ್ದರೂ ತಾವೇ ಕ್ರೀಡೆ, ವ್ಯಾಯಾಮ, ಯೋಗವನ್ನು ಹೇಳಿಕೊಡ್ತಿದ್ದಾರೆ. ರೈತರಿಗೆ ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸ್ತಿದ್ದಾರೆ.


Viewing all articles
Browse latest Browse all 80355

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>