Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ಖಾಸಗಿ ಸಿಮೆಂಟ್ ಕಂಪೆನಿಗೆ ಸಾವಿರ ಎಕರೆ ಭೂಮಿ- ನೂರಾರು ಕೋಟಿ ಡೀಲ್‍ಗೆ ಇಳಿಯಿತಾ ಸರ್ಕಾರ?

$
0
0

ಕಲಬುರಗಿ: 100 ಕೋಟಿಗೂ ಅಧಿಕ ಬೆಲೆ ಬಾಳುವ ಸರ್ಕಾರಿ ಜಮೀನನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಲೀಸ್‍ಗೆ ಕೊಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬೆನಕನಳ್ಳಿ ಮತ್ತು ಕೊಡ್ಲಾ ಗ್ರಾಮಗಳ 1,104 ಎಕರೆ ಸರ್ಕಾರಿ ಜಮೀನನ್ನು 30 ವರ್ಷಗಳ ಕಾಲ ಶ್ರೀ ಸಿಮೆಂಟ್ ಕಂಪನಿಯವರಿಗೆ ಲೀಸ್‍ಗೆ ನೀಡಲು ಸರ್ಕಾರ ಮುಂದಾಗಿದೆ. ನಿಯಮಗಳ ಪ್ರಕಾರ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ನೀಡಲು ಬರುವುದಿಲ್ಲ. ಈ ಕುರಿತು ಕಲಬುರಗಿ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಸರ್ಕಾರಕ್ಕೆ ಪತ್ರ ಬರೆದರೂ ಕೂಡ ಸಿದ್ದು ಸರ್ಕಾರ ಸುಮ್ಮನಿಲ್ಲ. ಸಾಕಷ್ಟು ಟ್ಯಾಕ್ಸ್ ಬರುತ್ತದೆ ಎಂಬ ಕಾರಣಕ್ಕೆ ಜಮೀನನ್ನು ಸಿಮೆಂಟ್ ಕಂಪೆನಿಗೆ ‘ಎನ್‍ಎ’ ಮಾಡಿಕೊಡಿ ಅಂತಾ ಕಂದಾಯ ಇಲಾಖೆಯ ಅಧಿಕಾರಿಗಳು ಡಿಸಿಗೆ ಪತ್ರ ಬರೆದಿದ್ದಾರೆ.

ದುರಂತ ಅಂದ್ರೆ ಈ ಹಿಂದೆ 2010ರಲ್ಲಿ ಇದೇ ಜಮೀನು ವಿವಾದ ಸಂಬಂಧ ಅಂದಿನ ಸಹಾಯಕ ಆಯುಕ್ತರಾಗಿದ್ದ ಡಿಕೆ ರವಿ ಅವರು ಶ್ರೀ ಸಿಮೆಂಟ್ ಕಂಪನಿಯ ಜೊತೆ ಕಾನೂನು ಹೋರಾಟ ನಡೆಸಿ ಜಮೀನನ್ನು ಮುಟ್ಟುಗೋಲು ಹಾಕಿಕೊಂಡಿದ್ರು. ಆದರೆ ಈಗ ಸರ್ಕಾರವೇ ಹಣದಾಸೆಗೆ ನೂರಾರು ಕೋಟಿ ಬೆಲೆ ಬಾಳುವ ಜಮೀನನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ನೀಡಲು ಮುಂದಾಗಿದೆ. ಸದ್ಯ ಈ ಪ್ರಕರಣದಿಂದ ಕಲಬುರಗಿ ಜಿಲ್ಲಾಧಿಕಾರಿ ಮತ್ತು ಸರ್ಕಾರದ ನಡುವೆ ಬಿಕಟ್ಟು ಎದುರಾಗಿದೆ.


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>