Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ಮಗನ ಕೊಳೆತ ಶವದ ಜೊತೆ 4 ದಿನ ಸ್ವಾಧೀನವಿಲ್ಲದ ತಾಯಿ ನರಳಾಟ- ಕಾರವಾರದಲ್ಲಿ ಘೋರ ಘಟನೆ

$
0
0

ಕಾರವಾರ: ಆನಾರೋಗ್ಯದಿಂದ ಮೃತಪಟ್ಟ ಮಗನ ಶವದೊಂದಿಗೆ ಹೆತ್ತ ತಾಯಿ ನಾಲ್ಕು ದಿನ ಮನೆಯಲ್ಲಿ ದಿನ ಕಳೆದ ಮನಕಲಕುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಕೇರಿಯಲ್ಲಿ ನಡೆದಿದೆ.

ವಿನಯ್ ಭಟ್ ಎಂಬವರು ತೀವ್ರ ಮದ್ಯವ್ಯಸನಿಯಾಗಿದ್ದು, ನಾಲ್ಕು ದಿನದ ಹಿಂದೆ ಲಿವರ್ ಸಮಸ್ಯೆಯಿಂದ ಮೃತಪಟ್ಟಿದ್ರು. ಇತ್ತ 80 ವರ್ಷದ ತಾಯಿ ಆಶಾ ವಿಷ್ಣುಭಟ್ ಕೂಡ ವಯೋಸಹಜತೆಯಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ಮಾತನಾಡುವ ಸ್ಥಿತಿಯಲ್ಲಿ ಕೂಡ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ತಾಯಿಗೂ ಕೂಡ ಮಗ ಸಾವನ್ನಪ್ಪಿರುವುದು ತಿಳಿದರೂ ಕೂಡ ಮನೆಯ ಬಾಗಿಲು ತೆರೆದು ಬೇರೆಯವರಿಗೆ ಹೇಳುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಮಗನ ಶವದ ಮುಂದೆಯೇ ಕುಳಿತು ರೋಧಿಸುವಂತಾಗಿತ್ತು.

ಮಗ ಸತ್ತು ನಾಲ್ಕು ದಿನ ಕಳೆದಿದ್ದ ಪರಿಣಾಮ ಹೆಣ ಕೊಳೆತ ವಾಸನೆ ಬಂದಿದ್ದರಿಂದ ಅಕ್ಕಪಕ್ಕದವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಮನೆಯ ಬಾಗಿಲು ಒಡೆದು ಒಳಹೋದಾಗ ವಿಷಯ ಬೆಳಕಿಗೆ ಬಂದಿದೆ.

ಸದ್ಯ ಅನಾರೋಗ್ಯ ಪೀಡಿತ ತಾಯಿ ಆಶಾರವರನ್ನು ಅಂಕೋಲದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸಿಕೊಳ್ಳುತಿದ್ದಾರೆ ಅಂತ ಾಸ್ಪತ್ರೆ ಮೂಲಗಳು ತಿಳಿಸಿವೆ.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>