Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80405

ಗ್ಯಾಸ್ ಕಟರ್‍ನಿಂದ ಬ್ಯಾಂಕ್ ಕಿಟಕಿ ಸರಳುಗಳನ್ನ ಕಟ್ ಮಾಡಿ ದರೋಡೆಗೆ ಯತ್ನ

$
0
0

ಬೆಂಗಳೂರು: ಬ್ಯಾಂಕ್ ಕಿಟಕಿಯ ಸರಳುಗಳನ್ನ ಗ್ಯಾಸ್ ಕಟರ್ ಮೂಲಕ ಕಟ್ ಮಾಡಿ ಕಳ್ಳರು ದರೋಡೆಗೆ ಯತ್ನಿಸಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ.

ಕಾವೇರಿ ಕಲ್ಪತರು ಗ್ರಾಮೀಣ ಬ್ಯಾಂಕಿನಲ್ಲಿ ತಡರಾತ್ರಿ ಈ ಕೃತ್ಯ ನಡೆದಿದೆ. ಟಿ.ಬೇಗೂರು ಪೊಲೀಸ್ ಚೌಕಿ ಪಕ್ಕದಲ್ಲಿರುವ ಈ ಬ್ಯಾಂಕ್ ನಲ್ಲಿ ಸುಮಾರು ಐದಾರು ಮಂದಿ ಕಳ್ಳರು ಬಂದು ಕಳ್ಳತನಕ್ಕೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

ಕಳ್ಳರು ಬ್ಯಾಂಕ್ ನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ನಾಶಮಾಡಿ ಹಣವಿದ್ದ ಸ್ಟ್ರಾಂಗ್ ರೂಮ್ ಕಟ್ ಮಾಡಲು ಸಾಧ್ಯವಾಗದ ಕಾರಣ ಹಣ ದೋಚಲು ಆಗಲಿಲ್ಲ. ಸಿನಿಮೀಯ ರೀತಿಯಲ್ಲಿ ರೂಪರೇಶಗಳನ್ನ ಸಿದ್ದಪಡಿಸಸಿ ಬ್ಯಾಂಕ್ ಹಿಂಬದಿಯ ಕಿಟಕಿಯನ್ನ ಚೌಕಾರವಾಗಿ ಕಟ್ ಮಾಡಿ ದರೋಡೆಗೆ ಸಂಚು ಮಾಡಿದ್ದಾರೆ.

ಈ ಕೃತ್ಯಕ್ಕೆ ಬಳಸಿದ್ದ ಗ್ಯಾಸ್ ಕಟರ್, ಇನ್ನಿತರ ಸಲಕರಣೆಗಳನ್ನ ಕಳ್ಳರು ಹೊಸದಾಗಿ ಖರೀದಿಸಿರುವ ಬಗ್ಗೆ ಪೊಲೀಸರು ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಕಳ್ಳರು ಎಲ್ಲಾ ಸಲಕರಣೆಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Viewing all articles
Browse latest Browse all 80405

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>