Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80445

ಅಣ್ಣನ ಗುಂಡೇಟಿಗೆ ತಮ್ಮ ಬಲಿ: ಕೊಡಗಿನಲ್ಲಿ ಅಮಾನವೀಯ ಘಟನೆ

$
0
0

ಮಡಿಕೇರಿ: ಆಸ್ತಿವಿಚಾರಕ್ಕೆ ಕಲಹ ಏರ್ಪಟ್ಟು ಅಣ್ಣನೇ ತಮ್ಮನನ್ನ ಗುಂಡಿಕ್ಕಿ ಕೊಂದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸುಂಟಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಣ್ಣ ಹರೀಶ್ 46 ವರ್ಷದ ಸುರೇಶ್‍ಗೆ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಹರೀಶ್ ಹಾಗೂ ಸುರೇಶ್ ನಡುವೆ ಈ ಹಿಂದಿನಿಂದಲೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವೈಮನಸ್ಸು ಇತ್ತು ಎನ್ನಲಾಗಿದ್ದು, ಇಂದು ಬೆಳಗ್ಗೆ ಹರೀಶ್ ತನ್ನ ಮನೆಯಲ್ಲಿದ್ದ ಸಿಂಗಲ್ ಬ್ಯಾರಲ್ ಗನ್‍ನಿಂದ ಸುರೇಶ್ ಮೇಲೆ ಗುಂಡು ಹಾರಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಸುರೇಶ್ ಮೃತಪಟ್ಟಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುಂಟಿಕೊಪ್ಪ ಠಾಣಾ ಪೊಲೀಸರು ಆರೋಪಿ ಹರೀಶ್‍ನನ್ನ ಬಂಧಿಸಿದ್ದಾರೆ.


Viewing all articles
Browse latest Browse all 80445

Latest Images

Trending Articles



Latest Images

<script src="https://jsc.adskeeper.com/r/s/rssing.com.1596347.js" async> </script>