Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80495

ಮಾನನಷ್ಟ ಕೇಸ್: ಕೇಜ್ರಿ ಪರ ವಾದದಿಂದ ಹಿಂದಕ್ಕೆ ಸರಿದ ಜೇಠ್ಮಲಾನಿ

$
0
0

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಹೂಡಿರುವ ಮಾನನಷ್ಟ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರ ವಾದ ಮಾಡದೇ ಇರಲು ಖ್ಯಾತ ವಕೀಲ ರಾಮ್ ಜೇಠ್ಮಲಾನಿ ನಿರ್ಧರಿಸಿದ್ದಾರೆ.

ಈ ಸಂಬಂಧ ಕೇಜ್ರಿವಾಲ್ ಗೆ ಪತ್ರ ಬರೆದಿರುವ ರಾಮ್ ಜೇಠ್ಮಲಾನಿ ಈ ಪ್ರಕರಣದ ವಾದದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ. ಈ ಪ್ರಕರಣದಲ್ಲಿ ವಾದಿಸಿದ್ದಕ್ಕೆ ಶುಲ್ಕವಾಗಿ 2 ಕೋಟಿ ರೂ. ಹಣವನ್ನು ಪಾವತಿಸಬೇಕು ಎಂದು ಕೇಳಿದ್ದಾರೆ.

ಈ ವಿಚಾರವಾಗಿ ಜೇಠ್ಮಲಾನಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಕೇಜ್ರಿವಾಲ್ ನನಗೆ ಪತ್ರ ಬರೆದಿದ್ದು, ಈ ಪತ್ರಕ್ಕೆ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಆದರೆ ಈ ಪತ್ರದಲ್ಲಿರುವ ವಿಚಾರವನ್ನು ನಾನು ಬಹಿರಂಗ ಪಡಿಸುವುದಿಲ್ಲ. ನೀವು ಬೇಕಾದರೆ ಕೇಜ್ರಿವಾಲ್ ಅವರನ್ನು ಈ ಪತ್ರದ ವಿಚಾರವಾಗಿ ಪ್ರಶ್ನೆ ಮಾಡಬಹುದು. ನಾನು ಈ ವಿಚಾರವನ್ನು ಸಾರ್ವಜನಿಕವಾಗಿ ತಿಳಿಸುವುದಿಲ್ಲ ಎಂದು ಅವರಿಗೆ ಭಾಷೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ನೀವು, ನಾನು ಕೋರ್ಟ್ ನಲ್ಲಿ ಬಳಸಿದ ಪದಕ್ಕಿಂತಲೂ ಹೆಚ್ಚಿನ ಆಕ್ಷೇಪಾರ್ಹ ಪದವನ್ನು ಬಳಸಿದ್ದೀರಿ ಎನ್ನುವ ವಿಚಾರವನ್ನು ಜೇಠ್ಮಲಾನಿ ಪತ್ರದಲ್ಲಿ ಬರೆದಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಏನಿದು ಪ್ರಕರಣ?
ಅರುಣ್ ಜೇಟ್ಲಿ ದೆಹಲಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಪ್ ಆರೋಪಿಸಿತ್ತು. ಇದರ ವಿರುದ್ಧ ಅರುಣ್ ಜೇಟ್ಲಿ, ಅರವಿಂದ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ಸಂಜಯ್ ಸಿಂಗ್, ರಾಘವ್ ಚಡ್ಡಾ, ಅಶುತೋಶ್ ಹಾಗೂ ದೀಪಕ್ ಬಾಜ್ಪೈ ಅವರ ಮೇಲೆ ಸಿವಿಲ್ ಹಾಗೂ ಕ್ರಿಮಿನಲ್ ಸೇರಿದಂತೆ ಎರಡು ಮಾನನಷ್ಟ ಮೊಕದ್ದಮೆ ಹಾಕಿದ್ದರು. ಸುಳ್ಳು ಹೇಳಿಕೆ ನೀಡಿ ಘನತೆಗೆ ಧಕ್ಕೆ ತಂದ ಆರೋಪದ ಮೇಲೆ 10 ಕೋಟಿ ರೂ. ಪರಿಹಾರ ನೀಡುವಂತೆ ಕೇಜ್ರಿವಾಲ್ ಹಾಗೂ ಇತರೆ ಮುಖಂಡರ ಮೇಲೆ ಸಿವಿಲ್ ಕೇಸ್ ಹಾಕಿದ್ದರು.

ಈ ಪ್ರಕರಣದಲ್ಲಿ ಕೇಜ್ರಿವಾಲ್ ಪರ ರಾಮ್ ಜೇಠ್ಮಲಾನಿ ವಕಾಲತ್ತು ವಹಿಸಿದ್ದರು. ದೆಹಲಿ ಹೈಕೋರ್ಟ್ ನಲ್ಲಿ ಮೇ 17ರಂದು ನಡೆದ ವಿಚಾರಣೆ ವೇಳೆ ಜೇಠ್ಮಲಾನಿ ಜೇಟ್ಲಿ ವಿರುದ್ಧ ಆಕ್ಷೇಪಾರ್ಹ ಪದವನ್ನು ಬಳಕೆ ಮಾಡಿದ್ದರು. ಕೋರ್ಟ್ ನಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಸಂಬಂಧ ಅರುಣ್ ಜೇಟ್ಲಿ ಅವರು ಕೇಜ್ರಿವಾಲ್ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಿಸಿ, 10 ಕೋಟಿ ಪರಿಹಾರಕ್ಕೆ ಆಗ್ರಹ ಮಾಡಿದ್ದರು.

ಈ ಕೇಸ್ ದಾಖಲಾದ ಬಳಿಕ ಅರವಿಂದ್ ಕೇಜ್ರಿವಾಲ್ ಕೋರ್ಟ್ ಗೆ ಅಫಿಡವಿತ್ ಸಲ್ಲಿಸಿದ್ದರು. ನಾನು ಅರುಣ್ ಜೇಟ್ಲಿ ಪರ ಆಕ್ಷೇಪಾರ್ಹ ಪದವನ್ನು ಬಳಕೆ ಮಾಡುವಂತೆ ಯಾವುದೇ ಸೂಚನೆ ನೀಡಿರಲಿಲ್ಲ. ಒಬ್ಬ ಹಿರಿಯ ವಕೀಲರಿಗೆ ನಾನು ಆಕ್ಷೇಪಾರ್ಹ ಪದವನ್ನು ಬಳಸುವಂತೆ ಸೂಚನೆ ನೀಡಲು ಸಾಧ್ಯವೇ ಎಂದು ಅಫಿಡವಿತ್‍ನಲ್ಲಿ ತಿಳಿಸಿದ್ದರು.

ಕೇಜ್ರಿವಾಲ್ ಪರ ವಾದ ಮಾಡುವುದಕ್ಕೆ ನಾನು ಯಾವುದೇ ಶುಲ್ಕವನ್ನು ಪಡೆಯುವುದಿಲ್ಲ ಎಂದು ಜೇಠ್ಮಲಾನಿ ಈ ಹಿಂದೆ ತಿಳಿಸಿದ್ದರು. ಆದರೆ ಈ ಪ್ರಕರಣದ ವಿಚಾರಣೆಯಲ್ಲಿ ಜೇಠ್ಮಲಾನಿ ಹಾಜರಾಗಿದ್ದಕ್ಕೆ, ದೆಹಲಿ ಸರ್ಕಾರ ಈ ಫೆಬ್ರವರಿಯಲ್ಲಿ 3.5 ಕೋಟಿ ರೂ. ಪಾವತಿಸಿತ್ತು. ಒಂದು ಬಾರಿ ಜೇಠ್ಮಲಾನಿ ಕೋರ್ಟ್ ಗೆ ಹಾಜರಾದರೆ 22 ಲಕ್ಷ ರೂ. ಶುಲ್ಕವನ್ನು ಪಾವತಿಸಬೇಕಿತ್ತು.

10 ಸಾವಿರ ದಂಡ: ಜೇಟ್ಲಿ ಹೂಡಿರುವ ಎರಡನೇ ಮಾನನಷ್ಟ ಕೇಸಿಗೆ ಸಂಬಂಧಿಸಿದಂತೆ ಸರಿಯಾದ ಪ್ರತಿಕ್ರಿಯೆ ನಿಗದಿತ ದಿನಾಂಕದ ಒಳಗಡೆ ಸಲ್ಲಿಸದ ಕಾರಣ ದೆಹಲಿ ಹೈಕೋರ್ಟ್ ಬುಧವಾರ ಕೇಜ್ರಿವಾಲ್ ಅವರಿಗೆ 10 ಸಾವಿರ ರೂ. ದಂಡ ವಿಧಿಸಿದೆ.

 


Viewing all articles
Browse latest Browse all 80495

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮದುವೆಯಾಗಲು ನಿರ್ಧರಿಸಿದ್ದಾರೆ ಅಮ್ಮ- ಮಗ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>