Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80455

ಸಿಎಂ ವಿರುದ್ಧ ಕಿಡಿಕಾರಿದ ಡಿಕೆ ಶಿವಕುಮಾರ್ ತಾಯಿ

$
0
0

ಮಂಡ್ಯ: ನನ್ನ ಮಕ್ಕಳು ಜನಸೇವೆಯನ್ನು ಮಾಡುತ್ತಿದ್ದಾರೆ. ಅವರೂ ಯಾರಿಗೂ ಮೋಸ ಮಾಡಿಲ್ಲ. ನಮ್ಮ ಮನೆ ಮತ್ತು ಮಕ್ಕಳು ಮನೆ ಮೇಲೆ ದಾಳಿ ಮಾಡುವಂತಹದ್ದು ಏನೂ ಇರಲಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಹೇಳಿದ್ದಾರೆ.

ಐಟಿ ಅಧಿಕಾರಿಗಳು ಮನೆಗ ಬಂದರು, ಮನೆಯ ಗೇಟ್‍ನ ಬೀಗ ಹಾಕಿದರು. ಇದ್ಯಾವುದಕ್ಕೂ ನನಗೆ ಬೇಸರವಿಲ್ಲ. ಅವರ ಮನೆಯ ಒಳಗಡೆ ಬಂದು ತಮ್ಮ ಕೆಲಸವನ್ನು ಮಾಡುತ್ತಿದ್ದರು. ನನ್ನಿಂದ ಅವರ ಕೆಲಸಕ್ಕೆ ಯಾವುದೇ ತೊಂದರೆಯಾಗಿಲ್ಲ. ನನ್ನ ಮಕ್ಕಳೂ ಎಂದೂ ತಪ್ಪು ಮಾಡಲ್ಲ, ಹಾಗಾಗಿ ನಾನು ಭಯಗೊಂಡಿಲ್ಲ ಎಂದು ಗೌರಮ್ಮ ಹೇಳಿದರು.

ಸಿಎಂ ವಿರುದ್ಧ ಕಿಡಿ: ಸಿಎಂ ಸಿದ್ದರಾಮಯ್ಯ ನನ್ನ ಮಗನಿಂದ ಮುಂದೆ ಬಂದಿದ್ದಾರೆ. ಸಿದ್ದರಾಮಯ್ಯ ನಂಬಿಸಿ ಕತ್ತು ಕುಯ್ಯುತ್ತಿದ್ದಾರೆ. ನನ್ನ ಮಕ್ಕಳನ್ನು ಕಂಡ್ರೆ ಅವರಿಗೆ ಆಗಿ ಬರೋದಿಲ್ಲ. ಅಕ್ಕಿ ಕೊಟ್ಟೆ, ಅದು ಕೊಟ್ಟೆ ಎಲ್ಲಾ ಕೊಟ್ರೂ ಅದೇನು ಅವರ ಮನೆಯಿಂದ ಕೊಟ್ಟಿಲ್ಲ. ರೈತರು ಬೆಳೆದಿದ್ದ ಅಕ್ಕಿಯನ್ನು ಕೊಟ್ಟಿದ್ದಾರೆ. ನನ್ನ ಮಕ್ಕಳ ಮನೆ ಮೇಲೆ ದಾಳಿ ನಡೆದರೂ ಸಿದ್ದರಾಮಯ್ಯ ಯಾಕೆ ಸುಮ್ಮನಿದ್ದಾರೆ? ಸಿದ್ದರಾಮಯ್ಯ ನನ್ನ ಮಕ್ಕಳ ಮೇಲೆ ಕತ್ತಿ ಮಸಿಯುತ್ತಿದ್ದಾರೆ. ಅವರಿಗೆ ಅಧಿಕಾರಿಗಳನ್ನು ಪ್ರಶ್ನಿಸುವ ಹಕ್ಕಿದ್ದರೂ ಸುಮ್ಮನಿದ್ದಾರೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.

ರಾಜಕೀಯ ಎನ್ನುವುದೇ ತುಂಬಾ ಕೆಟ್ಟದ್ದು, ಇದರಲ್ಲಿ ಜನ ನಾವುಗಳು ಮುಂದೆ ಬರೋದನ್ನು ಸಹಿಸಲ್ಲ. ಹೀಗಾಗಿ ದ್ವೇಷವನ್ನು ಸಾಧಿಸುತ್ತಾರೆ. ನಮ್ಮ ಮನೆಯ ಮೇಲೆ ಐಟಿ ದಾಳಿ ನಡೆಯೋದಕ್ಕೆ ಪ್ರಧಾನ ಮಂತ್ರಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇರ ಹೊಣೆ ಆಗುತ್ತಾರೆ. ಇದರ ಪ್ರತಿಫಲವನ್ನು ಮುಂದೊಂದು ದಿನ ಅನುಭವಿಸುತ್ತಾರೆ. ಈ ರೀತಿಯ ದ್ವೇಷ ಮಾಡುವರು ಹುಚ್ಚರು, ಮುಟ್ಟಾಳರು ಎಂದು ಕಿಡಿಕಾರಿದರು.

ರಾಜ್ಯದ್ಯಾಂತ ನನ್ನ ಮಕ್ಕಳ ಪರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆಲ್ಲ ನನ್ನ ಧನ್ಯವಾದಗಳು. ರಾಜ್ಯದ ಬಿಜೆಪಿ, ಜನತಾದಳ ಎಲ್ಲಾ ಪಕ್ಷದವರು ನಮಗೆ ಸಹಾಯ ಮಾಡಿದ್ದಾರೆ. ಮುಂದೊಂದು ದಿನ ನನ್ನ ಮಕ್ಕಳು ನಿಮ್ಮ ಋಣ ತೀರುಸ್ತಾರೆ. ನನ್ನ ಮಕ್ಕಳು ತುಂಬಾ ಪವಿತ್ರವಾದವರು. ಅವರಿಗೆ ಮೋಸ ಮಾಡಬೇಕು ಎಂಬ ಮನಸ್ಸಿಲ್ಲ. ತಪ್ಪು ಮಾಡುವ ಮಕ್ಕಳನ್ನು ನಾನು ಹೆತ್ತಿಲ್ಲ ಎಂದು ಹೇಳಿದರು.

 


Viewing all articles
Browse latest Browse all 80455

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ತುಳು ತೆರೆಗೆ ಸೋನಿಯಾ ಎಂಟ್ರಿ


ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಕಬ್ಬಿನಗದ್ದೆಯಲ್ಲಿ ಅತ್ಯಾಚಾರದ ಬಳಿಕ ಪೈಶಾಚಿಕ ಕೃತ್ಯ


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>