Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80495

ಅಮಿತ್ ಶಾ, ರಾಹುಲ್ ಗಾಂಧಿ ಪ್ರವಾಸದ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದು ಹೀಗೆ

$
0
0

ಧಾರವಾಡ: ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಹಾಗೂ ರಾಹುಲ್ ಗಾಂಧಿ ಪಕ್ಷ ಬೆಳವಣಿಗೆ ಬಗ್ಗೆ ಮಾತ್ರ ಪ್ರವಾಸ ಮಾಡುತ್ತಿದ್ದು, ಮಹದಾಯಿ ಬಗ್ಗೆ ಚಕಾರ ಎತ್ತಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಬಂದಿದೆ. ರೈತರಿಗೆ ನೀರಿನ ಹಾಹಾಕಾರ ಎದುರಾಗಿದೆ. ಮಹದಾಯಿ ನೀರಿನ ಸಮಸ್ಯೆ ಇದ್ದರೂ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಅಧಿಕಾರ ಮುಖ್ಯವಾಗಿದೆ ಎಂದರು.

ರೈತರಿಗೆ ಬೇಕಾದ ನೀರಿನ ವಿಷಯ ಎತ್ತುತ್ತಿಲ್ಲ. ಮಹದಾಯಿ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಗೋವಾ ಸಿಎಂ ನಿರ್ಲಜ್ಜ ಸಿಎಂ ಎಂದು ಕಿಡಿಕಾರಿದರು. ಚುನಾವಣೆಯಲ್ಲಿ ರಾಜಕೀಯ ಮಾಡದೇ, ರಾಜ್ಯದ ರೈತರ ಹಾಹಾಕಾರ ಇದೆ. ಅದಕ್ಕೆ ಪರಿಹಾರ ಕೊಡುವ ಕೆಲಸವನ್ನು ಅಮಿತ್ ಶಾ ಮಾಡಬೇಕು ಎಂದು ತಿಳಿಸಿದರು.

ನಾನೀಗಾಗಲೇ ಅಮಿತ್ ಶಾ ಅವರಿಗೆ ಪತ್ರ ಬರೆದು ಮಹದಾಯಿ ಬಗ್ಗೆ ಉಲ್ಲೇಖ ಮಾಡಿದ್ದೇನೆ. ಕಾಂಗ್ರೆಸ್‍ನ ರಾಹುಲ್ ಗಾಂಧಿ ಕೂಡಾ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದ್ದಾರೆ. ಎರಡು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದರೂ ಯಾವುದೇ ಪ್ರತಿಕ್ರಿಯೇ ಇಲ್ಲ. ರೈತರ ಮೇಲೆ ಕೇಸ್ ಹಾಕಿದ್ರೂ ಜನ ಛೀ.. ಥೂ.. ಅಂದರೂ ಸಮಸ್ಯೆ ಮಾತ್ರ ಸರಿಯಾಗುತ್ತಿಲ್ಲ. ಸೋನಿಯಾ ಗಾಂಧಿ ಅವರು ಕೂಡಾ ಮಹದಾಯಿ ಜೋಡಿಸುವ ವಿಚಾರದಲ್ಲಿ ಮೌನವಾಗಿದ್ದಾರೆ. ಬಿಜೆಪಿಗೆ ಜನರು ಅಧಿಕಾರ ಕೊಟ್ಟಿದ್ದಾರೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆಸಿದರೆ ಕೇಂದ್ರ ಸರ್ಕಾರದಲ್ಲಿ ಸೋನಿಯಾ ಗಾಂಧಿಗೆ ಆದ ಸ್ಥಿತಿ ನಿಮಗೂ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.

ನಾಲ್ಕು ಜಿಲ್ಲೆಯ ಜನರು ಚುನಾವಣೆಗೆ ಬಹಿಷ್ಕಾರ ಹಾಕಬೇಕು. ನೀರು ತಂದು ಕೊಟ್ಟವರಿಗೆ ಓಟು ಹಾಕುವ ಕೆಲಸ ಆಗಬೇಕು. ನಿರ್ಗಮಿತ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ದೇಶದಲ್ಲಿ ಮುಸ್ಲಿಮರು ಅಸುರಕ್ಷಿತ ಎಂದು ಹೇಳಿದ್ದಾರೆ. ಎರಡು ಬಾರಿ ನೀವು ಹಿಂದೂ ಸುರಕ್ಷತೆಯಲ್ಲಿ ಉಪರಾಷ್ಟ್ರಪತಿಯಾಗಿದ್ದೀರಿ. ಹೀಗಾಗಿ ಈ ರೀತಿ ಹೇಳಿಕೆ ನೀಡಿರುವುದು ಮೂರ್ಖತನವಾಗಿದೆ ಎಂದು ಹೇಳಿದರು.


Viewing all articles
Browse latest Browse all 80495

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮದುವೆಯಾಗಲು ನಿರ್ಧರಿಸಿದ್ದಾರೆ ಅಮ್ಮ- ಮಗ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>