Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80350

ಗಣಪತಿ ಕೇಸ್‍ನಲ್ಲಿ ಸಾಕ್ಷ್ಯ ಇದ್ರೆ ತೋರಿಸಲಿ: ಬಿಜೆಪಿಗೆ ಜಾರ್ಜ್ ಸವಾಲು

$
0
0

ಬೆಂಗಳೂರು: ಬಿಜೆಪಿಯವರು ಸುಳ್ಳು ಹೇಳುವುದನ್ನು ತಮ್ಮ ಕಸುಬಾಗಿ ಮಾಡಿಕೊಂಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ತಿರುಗೇಟು ನೀಡಿದ್ದಾರೆ.

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜೀನಾಮೆ ನೀಡಬೇಕೆಂಬ ಬಿಜೆಪಿ ಆಗ್ರಹಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಡಿವೈಎಸ್ಪಿ ಪ್ರಕರಣವು ಈಗ ಸುಪ್ರೀಂ ಕೋರ್ಟ್‍ನಲ್ಲಿದೆ. ಹೀಗಾಗಿ ಪ್ರಕರಣದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಬಿಜೆಪಿಯವರು ಸಾಕ್ಷ್ಯಗಳು ನಾಶ ಆಗಿದೆ ಎಂದು ಹೇಳುತ್ತಿದ್ದಾರೆ. ನನಗೂ ಹಾಗೂ ಫೋನ್ ಕಾಲ್‍ಗಳಿಗೆ ಯಾವುದೇ ಸಂಬಂಧವಿಲ್ಲ. ಈ ಪ್ರಕರಣಕ್ಕೂ ನನಗೂ ಸಂಬಂಧ ಇದ್ದರೆ ಸಾಕ್ಷ್ಯ ತೋರಿಸಲಿ ಎಂದು ಜಾರ್ಜ್ ಸವಾಲು ಹಾಕಿದರು.

ಸಿಐಡಿಯಿಂದ ಸಾಕ್ಷ್ಯ ನಾಶವಾಗಿದೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಪ್ರಶ್ನೆಗೆ ಸಿಐಡಿಯವರು ಉತ್ತರಿಸಬೇಕು. ವರದಿ ಸರಿ ಇಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ದಾಖಲೆ ಇದ್ದರೆ ಸಿಐಡಿಗೆ ಕೊಡಬಹುದಿತ್ತಲ್ಲ ಯಾಕೆ ಸಾಕ್ಷ್ಯಗಳನ್ನು ಕೊಡಲಿಲ್ಲ ಎಂದು ಜಾರ್ಜ್ ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ನನ್ನ ಹೆಸರು ಕೇಳಿಬಂದ ಕೂಡಲೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದೆ. ನಂತರ ಸಿಐಡಿಯವರು ಬಿ ರಿಪೋರ್ಟ್ ಹಾಕಿದಾಗ ಸಿಎಂ ನನ್ನನ್ನು ಮತ್ತೆ ಮಂತ್ರಿಯನ್ನಾಗಿ ಮಾಡಿದ್ದರು. ಯಾರೂ ಹೀಗೆ ರಾಜಿನಾಮೆ ಕೊಡುವುದಿಲ್ಲ. ಆದರೆ ನಾನು ಕೊಟ್ಟಿದ್ದೇನೆ. ಈಗಲೂ ಕೇಂದ್ರದ ಹಾಲಿ ಸಚಿವರ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆಯೇ? ಅವರೆಲ್ಲ ಯಾಕೆ ರಾಜಿನಾಮೆ ಕೊಟ್ಟಿಲ್ಲ ಎನ್ನುವುದನ್ನು ಜನ ಗಮನಿಸುತ್ತಾರೆ ಎಂದರು.

ಮೇಯರ್ ಚುನಾವಣೆ ವಿಚಾರವಾಗಿ ಮಾತನಾಡಿದ ಜಾರ್ಜ್ ಬಿಬಿಎಂಪಿ ಮೇಯರ್ ಚುನಾವಣೆ ಮುಂದಿನ ತಿಂಗಳಲ್ಲಿ ನಡೆಯಲಿದೆ ಹಾಗೂ ಈ ಸಲವೂ ಬಿಬಿಎಂಪಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್


Viewing all articles
Browse latest Browse all 80350

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>