Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ಡಾ.ವಿಷ್ಣುವರ್ಧನ್ ಕಂಚಿನ ಪುತ್ಥಳಿ ಮಂದಿರದಲ್ಲಿ ನಾಗರಹಾವು ಪ್ರತ್ಯಕ್ಷ್ಯ!

$
0
0

ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಪಟ್ಟಣದ ಹೊನ್ನಗಂಗಯ್ಯನ ಪಾಳ್ಯದಲ್ಲಿರುವ ಡಾ.ವಿಷ್ಣುವರ್ಧನ್ ಕಂಚಿನ ಪುತ್ಥಳಿಯಲ್ಲಿ ನಾಗರಹಾವೊಂದು ಪ್ರತ್ಯಕ್ಷ್ಯ ವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು.

ವಿಷ್ಣು ಅಭಿಮಾನಿಗಳು ಕಂಚಿನ ಪುತ್ಥಳಿ ಇರುವ ಮಂದಿರದಲ್ಲಿ ಇಂದು ಬೆಳಗ್ಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ಈ ಸಂಧರ್ಭದಲ್ಲಿ ಐದೂವರೆ ಅಡಿ ಉದ್ದದ 8 ರಿಂದ 9 ವರ್ಷದ ದೈತ್ಯ ನಾಗರಹಾವು ಪ್ರತ್ಯಕ್ಷ್ಯವಾಗಿದೆ. ಈ ವೇಳೆ ಆತಂಕಗೊಂಡ ಸ್ಥಳೀಯರು ಉರಗ ರಕ್ಷಕರಿಗೆ ದೂರವಾಣಿ ಕೆರೆ ಮಾಡಿದ್ದು, ಸ್ಥಳಕ್ಕೆ ಬಂದ ಸ್ನೇಕ್ ಲೋಕೇಶ್ ಅವರು ಹಾವನ್ನ ರಕ್ಷಣೆ ಮಾಡಿದ್ದರೆ.

ನೆಲಮಂಗಲ ಪಟ್ಟಣದ ಹೊನ್ನಗಂಗಯ್ಯನ ಪಾಳ್ಯದಲ್ಲಿ ಅಭಿಮಾನಿಗಳು ಡಾ.ವಿಷ್ಣುವರ್ಧನ್ ಸೇವಾ ಸಮಿತಿ ಎಂಬ ಸಂಘವನ್ನ ನಿರ್ಮಾಣ ಮಾಡಿಕೊಂಡು ಕಂಚಿನ ಪುತ್ಥಳಿಯ ಮಂದಿರವನ್ನ ಕಳೆದ ಐದು ವರ್ಷದ ಹಿಂದೆಯೇ ನಿರ್ಮಿಸಿದ್ದರು. ಸೋಮವಾರ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 68ನೇ ಹುಟ್ಟು ಹಬ್ಬವಿದ್ದು, ಈ ನಾಗರಹಾವು ಪ್ರತ್ಯಕ್ಷ್ಯದಿಂದ ಸ್ಥಳೀಯರಲ್ಲಿ ಹಾಗೂ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಇದೇ ರೀತಿ ಈ ಪುತ್ಥಳಿಯ ಬಳಿ ನಾಲ್ಕೈದು ಬಾರಿ ನಾಗರಹಾವುಗಳು ಕಾಣಿಸಿಕೊಂಡಿವೆ. ಪೊದೆ ಹಾಗೂ ಹುತ್ತಗಳು ಇರುವ ಕಾರಣದಿಂದ ಉರಗಗಳು ಸರ್ವೇ ಸಾಮನ್ಯವಾಗಿ ಕಾಣಿಸುತ್ತವೆ ಎಂದು ಉರಗ ರಕ್ಷಕ ಸ್ನೇಕ್ ಲೋಕೇಶ್ ತಿಳಿಸಿದ್ದಾರೆ.


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>