Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80425

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿಂದೆ ಸನಾತನ ಸಂಸ್ಥೆ ಕೈವಾಡ?

$
0
0

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಪೊಲೀಸರು ಈಗ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆ ವ್ಯಕ್ತಪಡಿಸಿದೆ.

ಹೌದು. 7.65 ಎಂಎಂ ಪಿಸ್ತೂಲ್ ಬಳಸಿ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿದೆ. ವಿಚಾರವಾದಿಗಳಾದ ಕಲಬುರ್ಗಿ, ಪನ್ಸಾರೆ, ದಾಬೋಲ್ಕರ್ ಅವರ ಹತ್ಯೆಗೂ 7.65 ಎಂಎಂ ಪಿಸ್ತೂಲ್ ಬಳಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯ ಪಿಸ್ತೂಲ್ ಬಳಕೆಯ ಸಾಮ್ಯತೆ ಬಗ್ಗೆ ತಿಳಿಸಿದ ಹಿನ್ನೆಲೆಯಲ್ಲಿ ಎಸ್‍ಐಟಿ ಈಗ ಸನಾತನ ಸಂಸ್ಥೆಯ ರುದ್ರಪಾಟೀಲ್ ಬಗ್ಗೆ ಶೋಧ ಆರಂಭಿಸಿದೆ ಎಂದು ಎಸ್‍ಐಟಿ ಮೂಲಗಳು ಮಾಹಿತಿ ನೀಡಿವೆ.

ರುದ್ರಪಾಟೀಲ್ ಮೂಲತಃ ಸಾಂಗ್ಲಿಯವನು. ಇವನು ಸನಾತನ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ. ಕಲಬುರ್ಗಿ ಹತ್ಯೆಯಲ್ಲಿ ಇವನು ಪ್ರಮುಖ ಪಾತ್ರವಹಿಸಿರುವ ಶಂಕೆ ಇರುವ ಹಿನ್ನೆಲೆಯಲ್ಲಿ ಈತನಿಗಾಗಿ ಎಸ್‍ಐಟಿ ತೀವ್ರ ಹುಡುಕಾಟ ನಡೆಸುತ್ತಿದೆ. ಪ್ರಸ್ತುತ ರುದ್ರಪಾಟೀಲ್ ತನ್ನ ತಂಡದ ಜೊತೆ ನೇಪಾಳದಲ್ಲಿ ಅಡಗಿ ಕುಳಿತ್ತಿದ್ದಾನೆ ಎನ್ನುವ ಮಾಹಿತಿ ಇದೆ. ಆದರೆ ರುದ್ರಪಾಟೀಲ್ ಹೇಗಿದ್ದಾನೆ ಎಂದು ಯಾರಿಗೂ ಗೊತ್ತಿಲ್ಲ. ಪೋಲಿಸರ ಬಳಿ ಅವನ 15 ವರ್ಷದ ಫೋಟೋ ಬಿಟ್ಟರೆ ಬೇರೆ ಯಾವ ಮಾಹಿತಿಯೂ ಸಿಕಿಲ್ಲ.

ರುದ್ರಪಾಟೀಲ್ ಜೊತೆ ವಿನಯ್ ಪವರ್ ಮತ್ತು ಸಾರಂಗ್ ಅಕೋಳ್ಕರ್ ಸೇರಿ ಈ ಹತ್ಯೆಗಳನ್ನು ಮಾಡಿದ್ದಾರೆ ಎನ್ನುವ ಶಂಕೆಯಿದ್ದು, ಇವರ ಪತ್ತೆಗೆ ಬಲೆ ಬೀಸಲಾಗಿದೆ. ಈ ಮೂವರು ಸಿಬಿಐ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಯ ವಾಂಟೆಡ್ ಪಟ್ಟಿಯಲ್ಲಿ ಇದ್ದು, ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರಿಗೆ ಬೇಕಾಗಿದ್ದಾರೆ.

ಈಗಾಗಲೇ ಸಿಬಿಐ, ಎನ್‍ಐಎ, ಮಹಾರಾಷ್ಟ್ರ ಹಾಗೂ ಕರ್ನಾಟಕ ಪೊಲೀಸರು ಎಷ್ಟೇ ಹೆಣಗಾಡಿದರೂ ಆರೋಪಿಗಳ ಬಗ್ಗೆ ಕಿಂಚಿತ್ತು ಮಾಹಿತಿ ಸಿಗುತ್ತಿಲ್ಲ. ಈ ಹಿಂದೆ ರುದ್ರಪಾಟೀಲ್ ಮೇಲೆ ಅನುಮಾನಗೊಂಡು ಅವನ ಗೆಳತಿಯನ್ನು ವಿಚಾರಣೆ ಮಾಡಲಾಗಿತ್ತು. ಆದರೆ ಈಗ ಅವನ ಗೆಳತಿಯೂ ನಾಪತ್ತೆಯಾಗಿದ್ದಾಳೆ.


Viewing all articles
Browse latest Browse all 80425

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>