Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80042

ಮದಗ ಮಾಸೂರು ಕೆರೆಯಲ್ಲಿ ಮುಳುಗುತ್ತಿದ್ದ 10 ವರ್ಷದ ಬಾಲಕನ ರಕ್ಷಣೆ

$
0
0

ಹಾವೇರಿ: ಐತಿಹಾಸಿಕ ಮದಗ ಮಾಸೂರು ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕನನ್ನ ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರನಹಳ್ಳಿ ಗ್ರಾಮದ ನಿವಾಸಿ ರವಿ(10) ಮಾಸೂರು ಕೆರೆಗೆ ಈಜಲು ಹೋಗಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಮದಗದ ಕೆಂಚಮ್ಮ ದೇವಿಯ ದರ್ಶನ ಪಡೆಯಲು ಕುಟುಂಬ ಸಮೇತ ಬಾಲಕ ಬಂದಿದ್ದ. ಪೋಷಕರು ದೇವರ ದರ್ಶನಕ್ಕೆ ತೆರಳಿದ್ದರೆ ರವಿ ಕೆರೆಗೆ ಈಜಲು ತೆರಳಿದ್ದ.

ಈ ಸಂದರ್ಭದಲ್ಲಿ ಹಿರೇಕೆರೂರು ಶಾಸಕ ಯುಬಿ ಬಣಕಾರ ಅವರು ಕೆರೆಗೆ ಬಾಗಿನ ಅರ್ಪಿಸಲು ಆಗಮಿಸಿದ್ದರು. ಈ ವೇಳೆ ಮುಳುಗುತ್ತಿದ್ದ ಬಾಲಕನನ್ನ ನೋಡಿದ ಸ್ಥಳೀಯರಾದ ಶಿವನಾಯಕ್, ಲಕ್ಷ್ಮಣನಾಯಕ್ ಎಂಬವರು ರಕ್ಷಣೆ ಮಾಡಿದ್ದಾರೆ. ರಕ್ಷಣೆಯ ಬಳಿಕ ಪೋಷಕರ ಜೊತೆಯಲ್ಲಿ ರವಿ ಸ್ವ ಗ್ರಾಮಕ್ಕೆ ವಾಪಸ್ ತೆರಳಿದ್ದಾನೆ.

 


Viewing all articles
Browse latest Browse all 80042


<script src="https://jsc.adskeeper.com/r/s/rssing.com.1596347.js" async> </script>