Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80320

ಪದ್ಮಭೂಷಣ ಪ್ರಶಸ್ತಿಗೆ ಧೋನಿ ಹೆಸರು ಶಿಫಾರಸು

$
0
0

ನವದೆಹಲಿ: ಭಾರತ ತಂಡದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಎಂಎಸ್ ಧೋನಿ ಹೆಸರನ್ನು ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿಗೆ ಬಿಬಿಸಿಐ ಶಿಫಾರಸು ಮಾಡಿದೆ.

ಪ್ರಸ್ತುತ ವರ್ಷದ ಪದ್ಮಭೂಷಣ ಪ್ರಶಸ್ತಿಗೆ ಬಿಸಿಸಿಐನಿಂದ ಧೋನಿ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದ್ದು, ಈ ನಿರ್ಧಾರವನ್ನು ಒಮ್ಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ ತಿಳಿಸಿದ್ದಾರೆ.

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಧೋನಿ ನಾಯಕತ್ವದಲ್ಲಿ ಮಾತ್ರ ಎರಡು ವಿಶ್ವಕಪ್(2011ರ ವಿಶ್ವಕಪ್ ಮತ್ತು 2007ರ ಟಿ-20 ವಿಶ್ವಕಪ್)ಗಳನ್ನು ಗೆದ್ದುಕೊಂಡಿದೆ. ಅಷ್ಟೇ ಅಲ್ಲದೇ 90 ಟೆಸ್ಟ್ ಪಂದ್ಯಗಳನ್ನು ಆಡಿರುವ ಕಾರಣ ಧೋನಿ ಹೆಸರನ್ನು ಬಿಟ್ಟು ಬೇರೆ ಯಾರನ್ನು ಪ್ರಶಸ್ತಿಗಾಗಿ ಪ್ರಸ್ತಾಪಿಸಿಲ್ಲ ಎಂದು ಖನ್ನಾ ಹೇಳಿದರು.

302 ಏಕದಿನ ಪಂದ್ಯಗಳಲ್ಲಿ 9737 ರನ್‍ಗಳನ್ನು ಹೊಡೆದಿರುವ 36 ವರ್ಷದ ಧೋನಿ ತಮ್ಮ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಹಲವು ಸಾಧನೆಗಳನ್ನು ಮಾಡಿದ್ದಾರೆ. 90 ಟೆಸ್ಟ್ ಪಂದ್ಯಗಳಲ್ಲಿ 4875 ರನ್, 78 ಟಿ-20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 1212 ರನ್‍ಗಳನ್ನು ಹೊಡೆದಿದ್ದಾರೆ. ಏಕದಿನದಲ್ಲಿ 6 ಶತಕ ಮತ್ತು 33 ಅರ್ಧಶತಕ ಹೊಡೆದಿರುವ ಧೋನಿ ಟೆಸ್ಟ್ ನಲ್ಲಿ 10 ಶತಕ, 77 ಅರ್ಧಶತಕ ಹೊಡೆದಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್ ನಲ್ಲಿ 584 ಕ್ಯಾಚ್, 163 ಸ್ಟಂಪಿಂಗ್ ಮಾಡಿದ್ದಾರೆ.

ಈಗಾಗಲೇ ಭಾರತ ಸರ್ಕಾರ ನೀಡುವ ಅರ್ಜುನ, ರಾಜೀವ್ ಗಾಂಧಿ ಖೇಲ್ ರತ್ನ ಮತ್ತು ಪದ್ಮಶ್ರೀ ಪ್ರಶಸ್ತಿಗಳ ಗೌರವಕ್ಕೆ ಪಾತ್ರರಾಗಿರುವ ಧೋನಿ ಅವರಿಗೆ ಈ ಬಾರಿ ಪದ್ಮಭೂಷಣ ಪ್ರಶಸ್ತಿ ಸಿಗುವುದು ಖಚಿತವಾಗಿದ್ದು, ಈ ಗೌರವಕ್ಕೆ ಪಾತ್ರರಾದ 11ನೇ ಕ್ರಿಕೆಟ್ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಈ ಹಿಂದೆ ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ಸುನೀಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಚಂದು ಬೋರ್ಡೆ, ಪ್ರೊ .ಡಿಬಿ ದಿಯೋಧರ್, ಸಿಕೆ ನಾಯ್ಡು ಮತ್ತು ಲಾಲಾ ಅಮರ್‍ನಾಥ್ ಅಲ್ಲದೆ, ಭಾರತದ ಪರ 13 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಪಟಿಯಾಲ ರಾಜ ಭಾಲಿಂದ್ರ ಸಿಂಗ್ ಮತ್ತು 1936ರಲ್ಲಿ ಇಂಗ್ಲೆಂಡ್ ಪ್ರವಾಸದ ನಾಯಕತ್ವವನ್ನು ವಹಿಸಿದ್ದ ವಿಜಯನಗರಂ ಮಹಾರಾಜ ವಿಜಯ ಆನಂದ್ ಅವರಿಗೆ ಪ್ರಶಸ್ತಿ ಸಿಕ್ಕಿತ್ತು.


Viewing all articles
Browse latest Browse all 80320

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>