Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ಕಮಲ್ ಭೇಟಿಯಾದ ಕೇಜ್ರಿವಾಲ್: ಇಬ್ಬರ ನಡುವೆ ಏನು ಮಾತುಕತೆ ನಡೆದಿದೆ?

$
0
0

ಚೆನ್ನೈ: ಸ್ವಂತ ಪಕ್ಷ ಸ್ಥಾಪಿಸುವ ಅಧಿಕೃತ ಸೂಚನೆಯನ್ನು ನೀಡಿರುವ ತಮಿಳು ನಟ ಕಮಲ್ ಹಾಸನ್‍ರ ರಾಜಕೀಯ ನಡೆಗಳು ಕುತೂಹಲವನ್ನು ಹುಟ್ಟಿಸುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದು ಕಮಲ್ ಮನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದು ಹೊಸ ರಾಜಕೀಯ ಚಿಂತನೆಗಳಿಗೆ ಕಾರಣವಾಗಿದೆ.

ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್‍ರನ್ನು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವತಃ ಕಮಲ್ ಹಿರಿಯ ಪುತ್ರಿ ಅಕ್ಷರ ಹಾಸನ್ ಸ್ವಾಗತಿಸಿದರು. ಕಳೆದ ಒಂಬತ್ತು ದಿನಗಳಿಂದ ಮಹಾರಾಷ್ಟ್ರದಲ್ಲಿ ಧ್ಯಾನವನ್ನು ಕೈಗೊಂಡಿದ್ದ ಕೇಜ್ರಿವಾಲ್ ಧ್ಯಾನದ ವಿರಾಮದಲ್ಲಿ ಚೆನ್ನೈಗೆ ಭೇಟಿ ನೀಡಿದ್ದರು.

ನಾನು ಕಮಲ್ ಹಾಸನ್ ಅವರ ಉತ್ತಮ ಕಾರ್ಯಗಳ ಬಹುದೊಡ್ಡ ಅಭಿಮಾನಿಯಾಗಿದ್ದು, ಪ್ರಸ್ತುತ ದೇಶದಲ್ಲಿ ಹಲವು ಕೋಮು ಶಕ್ತಿಗಳು ಬಲ ಪಡೆದುಕೊಳ್ಳುತ್ತಿವೆ ಎಂಬ ಭಾವನೆಯನ್ನು ಜನರು ವ್ಯಕ್ತಪಡಿಸಿದ್ದಾರೆ. ನಮ್ಮಿಬ್ಬರ ಭೇಟಿಯಲ್ಲಿ ಉತ್ತಮ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದರು.

ನಂತರ ಮಾತನಾಡಿದ ಕಮಲ್, ನನ್ನ ಮನೆ ಹಲವು ದಿನಗಳಿಂದ ರಾಜಕೀಯ ಚಟುಟಿಕೆಗಳ ತಾಣವಾಗಿದೆ. ನಮ್ಮ ತಂದೆಯ ಅವಧಿಯಲ್ಲಿಯೂ ಇದೇ ರೀತಿ ಇತ್ತು. ನಾನು ಅದನ್ನು ದೂರ ಮಾಡಿದ್ದೆ. ಆದರೆ ಇಂದು ರಾಜಕೀಯ ಪ್ರವೇಶವನ್ನು ಪಡೆಯುತ್ತಿರುವ ನನಗೆ ಕೆಲವು ಸಲಹೆಗಳನ್ನು ನೀಡಲು ಅರವಿಂದ್ ಕೇಜ್ರಿವಾಲ್ ಆಗಮಿಸಿದ್ದರು ಎಂದು ಹೇಳಿದರು.

ಕಮಲ್ ರಾಜಕೀಯ ಪ್ರವೇಶ ಖಚಿತವಾದ ನಂತರ ಭೇಟಿ ಮಾಡುತ್ತಿರುವ ಎರಡನೇ ಮುಖ್ಯಮಂತ್ರಿ ಕೇಜ್ರಿವಾಲ್ ಆಗಿದ್ದು, ಈ ಮೊದಲು ಕೇರಳ ಸಿಎಂ ಪಿಣರಾಯಿ ವಿಜಯನ್‍ರನ್ನು ಭೇಟಿ ಮಾಡಿ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದ್ದರು. ಈ ಹಿಂದೆ ಕಮಲ್ ಹಾಗೂ ಕೇಜ್ರಿವಾಲ್ ಭೇಟಿ 2015 ರ ಸಿನಿಮಾ ಚಿತ್ರೀಕರಣ ಸಮಯದಲ್ಲಿ ನಡೆದಿತ್ತು.

ಪ್ರಸ್ತುತ ಕಮಲ್ ತಮಿಳು ಅವತರಣಿಕೆಯ ಬಿಗ್‍ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಕಳೆದ ಕೆಲವು ತಿಂಗಳಿಂದ ತಮಿಳುನಾಡಿನ ರಾಜಕೀಯದಲ್ಲಿ ಕಾಣಿಸಿಕೊಂಡಿರುವ ಅಸ್ಥಿರತೆಯ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

ಕೆಲ ದಿನಗಳ ಹಿಂದೆ ಮಾಧ್ಯಮಗಳು ಕಮಲ್ ರಾಜಕೀಯ ಪ್ರವೇಶದ ಕುರಿತು ಪ್ರಶ್ನಿಸಿದಾಗ, ನಾನು ಈ ಕುರಿತು ಮಹತ್ವದ ಚಿಂತನೆಗಳನ್ನು ನಡೆಸುತ್ತಿದ್ದು, ಯಾವುದಾದರು ರಾಜಕೀಯ ಪಕ್ಷವು ತನ್ನ ಚಿಂತನೆಗೆ ಸೂಕ್ತ ಎನಿಸುವ ವೇದಿಕೆಯನ್ನು ಒದಗಿಸಿಕೊಡುವ ಸಾಧ್ಯತೆಗಳಿವೆಯೇ ಎಂದು ಮಾಧ್ಯಮಗಳಿಗೆ ಮರು ಪ್ರಶ್ನಿಸಿದ್ದರು.


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>