Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80042

ಕಬಿನಿ ಜಲಾಶಯ ಭರ್ತಿ: ಬಾಗಿನ ಅರ್ಪಿಸಿದ ಸಿಎಂ

$
0
0

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆಯಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿ ವಂದನೆ ಸಲ್ಲಿಸಿದರು.

ಆರಂಭದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದ ಕಾರಣ ಕಬಿನಿ ಜಲಾಶಯ ತುಂಬುವ ಯಾವ ಲಕ್ಷಣಗಳು ಇರಲಿಲ್ಲ. ಆದರೆ ಕೊನೆಯಲ್ಲಿ ಮುಂಗಾರು ಮಳೆ ಚುರುಕಾದ ಕಾರಣ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯ ಭರ್ತಿಯಾಗಿದೆ.

2284 ಅಡಿ ಇದೆ ಎತ್ತರದ ಕಬಿನಿ ಜಲಾಶಯದ ಇಂದಿನ ಒಳಹರಿವು 15,800 ಕ್ಯೂಸೆಕ್ ಇದೆ. ಜಲಾಶಯದಿಂದ ಕಪಿಲಾ ನದಿಗೆ 8,300 ಕ್ಯೂಸೆಕ್‍ನೀರು ಹೊರ ಬಿಡಲಾಗುತ್ತಿದೆ.

ಜಲಾಶಯ 19.50 ಟಿಎಂಸಿ ಅಡಿ ನೀರು ಸಂಗ್ರಹದ ಸಾಮರ್ಥ್ಯವಿದ್ದು, ಅದರಲ್ಲಿ 16.50 ಟಿಎಂಸಿ ಅಡಿ ನೀರನ್ನು ಮಾತ್ರ ಬಳಕೆ ಮಾಡಬಹುದಾಗಿದೆ.

18 ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ, ನಾಲ್ಕು ವರ್ಷಗಳ ಬಳಿಕ ಕಬಿನಿ ಜಲಾಶಯ ಭರ್ತಿಯಾಗಿದೆ. ಪ್ರತಿವರ್ಷ ಬೆಳೆಗೆ ಸುಮಾರು 20 ಟಿಎಂಸಿ ಅಡಿ ಮತ್ತು ಕುಡಿಯಲು 7.86 ಟಿಎಂಸಿ ಅಡಿ ನೀರಿನ ಅವಶ್ಯಕತೆ ಇದೆ. ಬೆಂಗಳೂರು ಮಂಡ್ಯ ಮೈಸೂರು ನಗರಗಳು ಸೇರಿದಂತೆ ಪ್ರತಿ ತಿಂಗಳು ಕುಡಿಯಲು 0.655 ಟಿಎಂಸಿ ಅಡಿ ನೀರು ಬೇಕಿರುತ್ತದೆ.


Viewing all articles
Browse latest Browse all 80042


<script src="https://jsc.adskeeper.com/r/s/rssing.com.1596347.js" async> </script>