Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80555

ನಮ್ಮ ಜೊತೆ ಬನ್ನಿ, ಇಲ್ಲ ಮಠ ಬಿಡಿ- ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಮತ್ತೆ ಸಭೆಗೆ ನಿರ್ಧಾರ

$
0
0

ಬೆಂಗಳೂರು: ನಮ್ಮ ಜೊತೆ ಬನ್ನಿ…ಇಲ್ಲ ಮಠ ಬಿಡಿ…! ಇಂಥದೊಂದು ಘೋಷ ವಾಕ್ಯ ಇಟ್ಟುಕೊಂಡು ಲಿಂಗಾಯತ ಮುಖಂಡರು ಹೋರಾಟ ಆರಂಭಿಸಲು ತೀರ್ಮಾನಿಸಿದ್ದಾರೆ.

ಪ್ರತ್ಯೇಕ ಧರ್ಮದ ವಿಚಾರವಾಗಿ ಅಕ್ಟೋಬರ್ 4ರಂದು ಮತ್ತೆ ಸಭೆ ಸೇರಲು ಲಿಂಗಾಯತ – ವೀರಶೈವ ಮುಖಂಡರು ತೀರ್ಮಾನಿಸಿದ್ದಾರೆ. ಸಚಿವ ಶರಣ್ ಪ್ರಕಾಶ್ ಪಾಟೀಲ್ ಕರೆದಿರೋ ಈ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ, ಬಸವರಾಜ್ ಹೊರಟ್ಟಿ ಸೇರಿದಂತೆ ಎಲ್ಲಾ ಲಿಂಗಾಯಿತ ಮುಖಂಡರು ಭಾಗವಹಿಸಲು ತೀರ್ಮಾನಿಸಿದ್ದಾರೆ.

ಇದಲ್ಲದೇ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ ನೀಡದೇ ಇದ್ರೆ ನಮ್ಮ ಪಾಡಿಗೆ ನಾವು, ನಿಮ್ಮ ಪಾಡಿಗೆ ನೀವು ಅನ್ನೋ ಸಂದೇಶ ರವಾನಿಸಲು ಕೂಡ ನಿರ್ಧರಿಸಿದ್ದಾರೆ. ಪದೇ ಪದೇ ಮೀಟಿಂಗ್ ಸೇರಿ ಗೊಂದಲ ಸೃಷ್ಟಿಯಾಗೋದನ್ನು ತಡೆಯಲು ಲಿಂಗಾಯತ ಮುಖಂಡರು ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಲಿಂಗಾಯಿತ ಪ್ರತ್ಯೇಕ ಧರ್ಮದ ವಿಚಾರಕ್ಕೆ ಬಿಜೆಪಿ ಶಾಸಕರು ಪರೋಕ್ಷವಾಗಿ ಬೆಂಬಲಕ್ಕೆ ನಿಂತಿದ್ದಾರೆ ಎನ್ನಲಾಗಿದೆ. ಧರ್ಮದ ವಿಚಾರವಾಗಿ ತುಟಿಕ್‍ಪಿಟಿಕ್ ಅನ್ನ ಬಾರದು ಅನ್ನೋ ಆರ್‍ಎಸ್‍ಎಸ್ ಕಟ್ಟಾಜ್ಞೆ ಒಂದು ಕಡೆಯಾದ್ರೇ ಹೇಗಾದ್ರು ಸರಿ ನಮ್ಮ ಸಮುದಾಯ ಮತ್ತು ಸಮುದಾಯದ ಮತಗಳನ್ನು ಉಳಿಸಿಕೊಳ್ಳಬೇಕು ಅಂತ ಬಿಜೆಪಿ ಶಾಸಕರು ಶತಾಯಗತಾಯ ಹೋರಾಟಕ್ಕೆ ನಿಂತಿದ್ದಾರಂತೆ.

ಲಿಂಗಾಯತ ಸಮಾವೇಶ ಎಲ್ಲಿ ನಡೆದರೂ ಕೂಡ ಪರೋಕ್ಷವಾಗಿ ಬಿಜೆಪಿ ಶಾಸಕರು ಸಾರಿಗೆ ವ್ಯವಸ್ಥೆ ಮಾಡಿಕೊಡ್ತಾ ಇದ್ದಾರೆ ಎನ್ನಲಾಗಿದೆ. ಪ್ರತಿ ಸಮಾವೇಶಕ್ಕೂ 30 ರಿಂದ 40 ಬಸ್‍ಗಳಲ್ಲಿ ತಮ್ಮ ಸಮುದಾಯದ ಮುಖಂಡರನ್ನು ಕಳುಹಿಸಿಕೊಡ್ತಿದ್ದು, ಈ ವಿಚಾರ ಎಲ್ಲಿಯೂ ಕೂಡ ಬಹಿರಂಗಪಡಿಸಬೇಡಿ. ಉಳಿದಕ್ಕೆ ನಮ್ಮ ಬೆಂಬಲವಿದೆ ಅನ್ನೋ ಸಂದೇಶ ಲಿಂಗಾಯತ ಮುಖಂಡರಿಗೆ ರವಾನಿಸಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ ಶಾಸಕರ ಈ ನಡೆ ಬಿಎಸ್‍ವೈ ಮತ್ತು ಶೆಟ್ಟರ್ ಅವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.


Viewing all articles
Browse latest Browse all 80555

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ಪ್ರೀ ವೆಡ್ಡಿಂಗ್ ಶೂಟ್ ಬಳಿಕ ಕೊಲೆ ಸಂಚು: ಪುಣೆಯಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ….!


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮದುವೆ ನಂತರ ಬ್ಲೂ ಫಿಲಂ ನೋಡಿದರೆ ಏನಾಗುತ್ತೆ?


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ನಟಿ ರಚಿತಾ ರಾಮ್ ಆಸೆ ಏನು ಗೊತ್ತಾ…!


ಕಾರ್ಪೋರೇಟರ್ ಅವ್ವ ಮಾದೇಶ  ಜೀವಾವಧಿ ಶಿಕ್ಷೆಗೆ ಕಾರಣವಾದ ` ಜೋಡಿ ಕೊಲೆ’ಯ  ಇನ್ ಸೈಡ್ ಸ್ಟೋರಿ…


ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ


ಚಿಕ್ಕ ಮಕ್ಕಳಿಗೆ ಸೆಕ್ಸ್ ಎಜುಕೇಷನ್ ಪಾಠ ಮಾಡಿದ ಯೋಗೀಶ್ ಮಾಸ್ಟರ್ –ವಿಡಿಯೋ ವೈರಲ್


ಹಾಸ್ಯ : ಪಿತೃ ಪಕ್ಷದಲ್ಲಿ ಭರ್ಜರಿ ಭೋಜನಕ್ಕೆ ಮುನ್ನ ಕಾಗೆಗಳ ಮೀಟಿಂಗು!


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


The Ashtanga Key - Surya Namaskar


ಅತ್ತಿಗೆ–ಮೈದುನ ಅಕ್ರಮ ಸಂಬಂಧ, ಆಮೇಲೇನಾಯ್ತು ಗೊತ್ತಾ…?



<script src="https://jsc.adskeeper.com/r/s/rssing.com.1596347.js" async> </script>