Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80310

ಬೆಳಗಾವಿಯ 5100 ಹೆಕ್ಟೇರ್ ಕೃಷಿ ಭೂಮಿ ಜಲಾವೃತ

$
0
0

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಎಫೆಕ್ಟ್ ಜಿಲ್ಲೆಯ ಜನರಿಗೆ ತಟ್ಟಿದೆ. ಜಿಲ್ಲೆಯು ಕೃಷ್ಣ, ವೇದಗಂಗಾ, ಧೂದಗಂಗಾ, ಮಲಪ್ರಭ ಹಾಗೂ ಘಟಪ್ರಭ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.

ಕೃಷ್ಣ, ವೇದಗಂಗಾ ಹಾಗೂ ಧೂದಗಂಗಾ ನದಿಗೆ 2.10 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಕಾರಣ ಚಿಕ್ಕೋಡಿ ತಾಲೂಕಿನ 7 ಹಾಗೂ ರಾಯಭಾಗ ತಾಲೂಕಿನ 3 ಹಾಗೂ ಅಥಣಿ ತಾಲೂಕಿನ ಒಂದು ಸೇತುವೆ ಮುಳುಗಡೆಯಾಗಿದೆ. ಕಬ್ಬು, ಶೇಂಗಾ, ಜೋಳ, ಸೋಯಾಬಿನ್, ತರಕಾರಿ ಬೆಳೆದಿದ್ದ 5100 ಹೆಕ್ಟೇರ್ ಕೃಷಿ ಜಮೀನು ನೀರಿನಿಂದ ಆವೃತವಾಗಿದೆ.

ನೆರೆಯಿಂದಾಗಿ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ತೋಟದ ಮನೆಗಳು ನಡುಗಡ್ಡೆಯಾಗಿ ಪರಿಣಮಿಸಿದೆ. ಇಲ್ಲಿ 50 ಕ್ಕೂ ಮನೆಗಳಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ತೋಟದಿಂದ ಜನರನ್ನು ಕರೆತರಲು ಜಿಲ್ಲಾಡಳಿತ ಬೋಟ್ ವ್ಯವಸ್ಥೆ ಮಾಡಿದೆ.

ಗಂಟೆ ಗಂಟೆಗೂ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದು ರಾಯಭಾಗ ತಾಲೂಕಿನ ಬಾವನ ಸವದತ್ತಿಯ ಸುಗಂಧಿಕಾ ದೇವಾಲಯ ನೀರಿನನಲ್ಲಿ ಮುಳಗಿದೆ. ನಾಗರ ಪಂಚಮಿ ಹಿನ್ನೆಲೆಯಲ್ಲಿ ಭಕ್ತರು ದೇವರ ದರ್ಶನದಿಂದ ವಂಚಿತರಾಗಿದ್ದಾರೆ. ಭಕ್ತರ ನದಿಗೆ ಪೂಜೆ ಸಲ್ಲಿಸಿ ವಾಪಸ್ ಆಗುವ ಸ್ಥಿತಿ ನಿರ್ಮಾಣವಾಗಿದೆ. ಈ ಗ್ರಾಮದ ಅನೇಕ ಮನೆಗಳು ನೀರಲ್ಲಿ ಮುಳುಗಿದ್ದು ಜಿಲ್ಲಾಡಳಿತ ಬೋಟ್ ವ್ಯವಸ್ಥೆ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

The post ಬೆಳಗಾವಿಯ 5100 ಹೆಕ್ಟೇರ್ ಕೃಷಿ ಭೂಮಿ ಜಲಾವೃತ appeared first on Kannada Public tv.


Viewing all articles
Browse latest Browse all 80310

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>