Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80425

ಹೊಟ್ಟೆ ನೋವು- 11 ತಿಂಗಳ ಹಸುಗೂಸಿಗೆ ನೇಣು ಬಿಗಿದು, ತಾನೂ ನೇಣಿಗೆ ಶರಣಾದ ತಾಯಿ

$
0
0

ದಾವಣಗೆರೆ: ಬಹು ದಿನಗಳಿಂದ ಇದ್ದ ಹೊಟ್ಟೆನೋವು ತಾಳಲಾರದೆ 11 ತಿಂಗಳ ಮಗುವಿಗೆ ನೇಣು ಬಿಗಿದು, ತಾನು ನೇಣಿಗೆ ಶರಣಾದ ಮನಕಲುಕುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡೇರಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ಶ್ವೇತಾ (26) ಮತ್ತು 11 ತಿಂಗಳ ಜಾಹ್ನವಿ ಮೃತ ದುರ್ದೈವಿಗಳಾಗಿದ್ದು, ಇಂದು ಬೆಳಗ್ಗೆ ಮನೆ ಮುಂದೆ ಚರಂಡಿ ಕಾಮಗಾರಿಗಾಗಿ ಜೆಸಿಬಿ ಬಂದಿದ್ದರಿಂದ ಶ್ವೇತಾಳ ತಂದೆ ತಿಮ್ಮಪ್ಪ ಕೆಲಸಗಾರರಿಂದ ಜೆಸಿಬಿಯ ಕೆಲಸ ಮಾಡಿಸುತ್ತಿದ್ದರು. ಮನೆಯಲ್ಲಿ ಶ್ವೇತಾ ಮತ್ತು ಜಾಹ್ನವಿ ಮಾತ್ರ ಇದ್ದರು. ಅಲ್ಲದೆ ಉಳಿದವರು ತೋಟದಲ್ಲಿ ಪೂಜೆ ನಡೆಯುತ್ತಿದ್ದರಿಂದ ಎಲ್ಲರು ೂ ಅಲ್ಲಿಗೆ ಹೋಗಿದ್ದರು.

ಮನೆಯಲ್ಲಿ ಶ್ವೇತಾ ಹಾಗೂ 11 ತಿಂಗಳ ಮಗು ಮಾತ್ರ ಇದ್ದು, ಬಹು ದಿನಗಳಿಂದ ತಾಳಲಾರದ ಹೊಟ್ಟೆ ನೋವು ಇದ್ದುದರಿಂದ ಸಾಕಷ್ಟು ಬಾರಿ ಆಸ್ಪತ್ರೆಗೆ ತೋರಿಸಲಾಗಿತ್ತು. ಆದರೂ ಗುಣಮುಖರಾಗಿರಲಿಲ್ಲ ಎನ್ನಲಾಗುತ್ತಿದೆ. ಇದರಿಂದ ಬೇಸತ್ತು ಶ್ವೇತಾ ತನ್ನ ಮಗುವಿಗೆ ನೇಣು ಬಿಗಿದು, ತಾನೂ ನೇಣು ಬಿಗಿದುಕೊಂಡು ಸಾವನ್ನಪ್ಪಿದಾಳೆ ಎಂದು ಪೊಲೀಸ್ ಠಾಣೆಯ ದೂರಿನಲ್ಲಿ ದಾಖಲಾಗಿದೆ. ಶ್ವೇತಾಳ ತಂದೆ ತಿಮ್ಮಪ್ಪ ನೀರು ಕುಡಿಯಲೆಂದು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯ ಅಟ್ಟದ ಮೇಲೆ ತೊಲೆಗೆ ಮಗುವನ್ನು ನೇಣು ಹಾಕಿ, ನಂತರ ತಾನೂ ನೇಣಿಗೆ ಶರಣಾಗಿದ್ದಾಳೆ. ಪಿಎಸ್‍ಐ ಶಿವರುದ್ರಪ್ಪ ಮೇಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Viewing all articles
Browse latest Browse all 80425

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>