Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80485

ಮಾರ್ಚ್ ಹೊತ್ತಿಗೆ ಇಡೀ ಶಿಕ್ಷಣ ವ್ಯವಸ್ಥೆ ಡಿಜಿಟಲ್ ರೂಪಾಂತರ: ಅಶ್ವಥ್ ನಾರಾಯಣ್

$
0
0

-ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧಿಸದೆ ನಮಗೆ ಉಳಿಗಾಲವಿಲ್ಲ

ಬಳ್ಳಾರಿ: ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಅನ್ವಯಿಸುವ ಮೂಲಕ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದ್ದು, ಮುಂಬರುವ ಮಾರ್ಚ್ ಹೊತ್ತಿಗೆ ರಾಜ್ಯದ ಇಡೀ ಶಿಕ್ಷಣ ವ್ಯವಸ್ಥೆಯನ್ನು ಡಿಜಿಟಲ್ ಆಗಿ ರೂಪಾಂತರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್  ಹೇಳಿದ್ದಾರೆ.

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮತ್ತು ನಾಸ್ಕಾಂ ನಡುವಿನ ಒಡಂಬಡಿಕೆಗೆ ಮತ್ತು ಎನ್‍ಇಪಿ ವಿಚಾರ ಸಂಕಿರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಡಿಜಿಟಲಿಕರಣದಿಂದಾಗಿ ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಸ್ಕಿಲ್ಸ್ ಪಾಸ್ ಪೋರ್ಟ್, ಸ್ಕಿಲ್ಸ್ ವ್ಯಾಲೆಟ್ ಮತ್ತು ಬ್ಯಾಡ್ಜಸ್ ನಂತಹ ಜಾಗತಿಕ ಗುಣಮಟ್ಟದ ಕೌಶಲ್ಯಗಳು ಉಚಿತವಾಗಿ ಸಿಗಲಿವೆ ಎಂದರು. ಇದನ್ನೂ ಓದಿ: ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧಿಸದೆ ನಮಗೆ ಉಳಿಗಾಲವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು, ನಾಸ್ಕಾಂನ `ಫ್ಯೂಚರ್ ಸ್ಕಿಲ್ಸ್ ಪ್ರೈಮ್’ ವೇದಿಕೆ ಸೇರಿದಂತೆ ಇತರ ಮೂಲಗಳಿಂದ ಈ ಶೈಕ್ಷಣಿಕ ವರ್ಷದಿಂದಲೇ 10 ಸಾವಿರ ಶಿಕ್ಷಕರಿಗೆ ಡಿಜಿಟಲ್ ತರಬೇತಿ ಕೊಡಲಾಗುವುದು. ಇನ್ಫೋಸಿಸ್ ಸಂಸ್ಥೆ ಮತ್ತು ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿ ಮೂಲಕವೂ 3 ಸಾವಿರ ಶಿಕ್ಷಕರಿಗೆ ಇಂತಹ ವಿಶ್ವ ಗುಣಮಟ್ಟದ ತರಬೇತಿಯನ್ನು ಒದಗಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡರು.

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ ಎರಡು ವರ್ಷಗಳಲ್ಲಿ 3.50 ಲಕ್ಷ ಕಲಿಕಾ ಸಾಮಗ್ರಿ ಸಿದ್ಧಪಡಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಎಲ್ಲಿದ್ದರೂ ನಿರಂತರವಾಗಿ ಕಲಿಯಬಹುದಾಗಿದೆ. ಬಹಳ ಉತ್ತಮವಾದ ಕಲಿಕೆಯ ಮಾದರಿಯನ್ನು ಪ್ರಪ್ರಥಮವಾಗಿ ಅಳವಡಿಸಿಕೊಂಡಿರುವ ರಾಜ್ಯದತ್ತ ಇಡೀ ಭಾರತವೇ ತಿರುಗಿ ನೋಡುತ್ತಿದೆ ಎಂದು ಸಚಿವರು ನುಡಿದರು. ಇದನ್ನೂ ಓದಿ: ಹೊಸ ಶಿಕ್ಷಣ ನೀತಿಯಲ್ಲಿ ಕಾಂಬಿನೇಶನ್‍ನಿಂದ ಕೋರ್ಸ್, ಸಬ್ಜೆಕ್ಟ್‌ಗೆ ಬದಲಾಯಿಸಲಾಗಿದೆ: ಅಶ್ವಥ್ ನಾರಾಯಣ್

ಕರ್ನಾಟಕವೇ ಇವತ್ತು ದೇಶದ ಜ್ಞಾನ ಮತ್ತು ಆರ್ಥಿಕ ರಾಜಧಾನಿಯಾಗಿದ್ದು, ಅಮೆರಿಕದಂತೆ ಉಜ್ವಲ ಅವಕಾಶಗಳಿವೆ. ಈ ವಿಚಾರದಲ್ಲಿ ನಾವು ಮುಂಬೈಯನ್ನು ಹಿಂದಿಕ್ಕಿದ್ದೇವೆ. ಸಂಶೋಧನೆ ಮತ್ತು ಆವಿಷ್ಕಾರಗಳ ತೊಟ್ಟಿಲಾಗಿರುವ ರಾಜ್ಯದ ಶಿಕ್ಷಣ ಕ್ಷೇತ್ರದತ್ತ ಈಗ ಇಡೀ ವಿಶ್ವವೇ ನೋಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ

ಎನ್‍ಇಪಿ ಗುರಿಯಂತೆ ಪ್ರತಿಯೊಬ್ಬ ಶಿಕ್ಷಿಕನಿಗೂ ಉದ್ಯೋಗ ಸಿಗಬೇಕು, ಇಲ್ಲವೇ ಉದ್ಯೋಗದಾತನಾಗಬೇಕು. ಈ ನಿಟ್ಟಿನಲ್ಲಿ ಕಲಿಕೆ, ಪ್ರಾಯೋಗಿಕತೆ, ನಾಯಕತ್ವ, ಕೌಶಲ್ಯ ಮತ್ತು ಪ್ರಾಜೆಕ್ಟ್ ಆಧರಿತ ಕಲಿಕೆಯನ್ನು ಜಾರಿಗೆ ತರಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಆಯಾಯ ತರಗತಿಗಳಲ್ಲೇ ನಡೆಯಲಿದೆ ಎಂದು ವಿವರಿಸಿದರು.

The post ಮಾರ್ಚ್ ಹೊತ್ತಿಗೆ ಇಡೀ ಶಿಕ್ಷಣ ವ್ಯವಸ್ಥೆ ಡಿಜಿಟಲ್ ರೂಪಾಂತರ: ಅಶ್ವಥ್ ನಾರಾಯಣ್ appeared first on Public TV.


Viewing all articles
Browse latest Browse all 80485

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಕಾರಿನಲ್ಲೇ 19 ದೇಶ ಸುತ್ತಿದ್ದಾರೆ ಈ ದಂಪತಿ


ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>