Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80365

ಪುನೀತ್ ಸಾವಿನ ಸುದ್ದಿ ನೋಡಿ ಹೃದಯಾಘಾತದಿಂದ ಅಭಿಮಾನಿ ಸಾವು

$
0
0

ಚಾಮರಾಜನಗರ: ಜಮೀನಿನಿಂದ ಹಿಂತಿರುಗಿ ಬಂದ ಅಪ್ಪು ಅಭಿಮಾನಿಯೋರ್ವ ಪುನೀತ್ ರಾಜ್‍ಕುಮಾರ್ ಸಾವಿನ ಸುದ್ದಿಯನ್ನು ಟಿವಿಯಲ್ಲಿ ನೋಡುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ನಡೆದಿದೆ.

ಮುನಿಯಪ್ಪ(28) ಮೃತ ಅಪ್ಪು ಅಭಿಮಾನಿ. ಜಮೀನಿನಿಂದ ಊಟಕ್ಕೆ ಬಂದಿದ್ದ ಈತ ಟಿವಿ ಹಾಕಿದ ವೇಳೆ ಪುನೀತ್ ಸಾವಿನ ಸುದ್ದಿ ಪ್ರಸಾರವಾಗಿದೆ. ನೆಚ್ಚಿನ ನಟನ ಸಾವಿನ ಸುದ್ದಿ ನೋಡುತ್ತಿದ್ದಂತೆಯೇ ಮುನಿಯಪ್ಪ ಕುಸಿದು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾನೆ. ಇದನ್ನೂ ಓದಿ: ಅಪ್ಪು ಆಸೆ ಕೊನೆಗೂ ಈಡೇರಲೇ ಇಲ್ಲ – ಖ್ಯಾತ ನಟನ ಬಗ್ಗೆ ಪುನೀತ್ ಮಾತು

ಈ ಸಂಬಂಧ ಸ್ಥಳೀಯರು ಮೃತ ಮುನಿಯಪ್ಪ ಅಪ್ಪಟ ಪುನೀತ್ ರಾಜ್‍ಕುಮಾರ್ ಅಭಿಮಾನಿಯಾಗಿದ್ದು, ಅವರ ಎಲ್ಲಾ ಚಿತ್ರವನ್ನು ಎರಡ್ಮೂರು ಬಾರಿ ನೋಡುತ್ತಿದ್ದ. ಇಲ್ಲಿನ ಚಿತ್ರಮಂದಿರಗಳು ಚೆನ್ನಾಗಿರುವುದಿಲ್ಲವೆಂದು ಬೆಂಗಳೂರಿಗೆ ತೆರಳಿ ಅಲ್ಲೇ ಅಪ್ಪು ಚಿತ್ರಗಳನ್ನು ಎರಡು ಮೂರು ಶೋ ಗಳನ್ನು ನೋಡಿ ಬರುತ್ತಿದ್ದ. ದಿಢೀರ್ ಮೃತಪಟ್ಟ ವಿಚಾರ ತಿಳಿದು ಈ ಅವಘಡ ಸಂಭವಿಸಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 2 ಗಂಟೆ ವ್ಯಾಯಾಮ, ಮೂರು ಗಂಟೆ ಐಸಿಯುನಲ್ಲಿ ಚಿಕಿತ್ಸೆ – ಪುನೀತ್ ಕೊನೆಕ್ಷಣ ಹೀಗಿತ್ತು

The post ಪುನೀತ್ ಸಾವಿನ ಸುದ್ದಿ ನೋಡಿ ಹೃದಯಾಘಾತದಿಂದ ಅಭಿಮಾನಿ ಸಾವು appeared first on Public TV.


Viewing all articles
Browse latest Browse all 80365

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>