Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80072

ಆರ್​ಸಿಬಿ, ಬೆಂಗಳೂರು ಬುಲ್ಸ್ ಜೊತೆಗಿತ್ತು ಅಪ್ಪು ಒಡನಾಟ

$
0
0

ಬೆಂಗಳೂರು: ಚಂದನವನದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಿನಿಮಾ ಕ್ಷೇತ್ರದಂತೆ, ಕ್ರೀಡಾ ಕ್ಷೇತ್ರದಲ್ಲೂ ಕೂಡ ತಮ್ಮನ್ನು ತಾವು ತೋಡಗಿಸಿಕೊಂಡಿದ್ದರು. ಐಪಿಎಲ್‍ನಲ್ಲಿ ಕರ್ನಾಟಕ ತಂಡವಾಗಿದ್ದ ಆರ್​ಸಿಬಿ, ಪ್ರೋ ಕಬಡ್ಡಿ ಲೀಗ್‍ನಲ್ಲಿ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿ ಕ್ರೀಡಾಂಗಣಕ್ಕೆ ಬಂದು ಪಂದ್ಯ ವೀಕ್ಷಿಸಿ ಹುರಿದುಂಬಿಸುತ್ತಿದ್ದ ಅಪ್ಪು ಅಗಲಿಕೆಯ ನೋವು ಕ್ರೀಡಾ ಕ್ಷೇತ್ರಕ್ಕೂ ತಟ್ಟಿದೆ.

ಪುನೀತ್ ರಾಜ್‍ಕುಮಾರ್(46) ಹೃದಯಾಘಾತದಿಂದ ಅಕ್ಟೋಬರ್ 29ರಂದು ಕೊನೆಯುಸಿರೆಳೆದಿದ್ದಾರೆ. ಕನ್ನಡಿಗರ ಪಾಲಿನ ನೆಚ್ಚಿನ ಅಪ್ಪು, ಕ್ರೀಡಾಪಟುಗಳಂತೆ ತಮ್ಮ ದೇಹವನ್ನು ಅಚ್ಚುಕಟ್ಟಾಗಿ ಫಿಟ್ ಆಗಿ ಬೆಳೆಸಿದ್ದರು. ಜೊತೆಗೆ ಕ್ರಿಕೆಟ್, ಕಬಡ್ಡಿ, ಫುಟ್‍ಬಾಲ್ ಕ್ರೀಡೆಗಳಲ್ಲಿ ಕರ್ನಾಟಕ ರಾಜ್ಯ ತಂಡಗಳಿಗೆ ಯಾವತ್ತು ಬೆಂಬಲವಾಗಿದ್ದರು. ಇದನ್ನೂ ಓದಿ: ಮಂಡಿಯೂರಲು ಒಪ್ಪಿದ ಡಿ ಕಾಕ್ ಶ್ರೀಲಂಕಾ ವಿರುದ್ಧ ಪಂದ್ಯಕ್ಕೆ ಹಾಜರ್

PUNEET

ಪುನೀತ್ ಕ್ರೀಡೆಯೊಂದಿಗೆ ಅಪಾರ ನಂಟು ಹೊಂದಿದ್ದು, ಜನಪ್ರಿಯ ಕ್ರಿಕೆಟ್ ಲೀಗ್ ಐಪಿಎಲ್‍ನಲ್ಲಿ ಬೆಂಗಳೂರಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಮತ್ತು ಪ್ರೊ ಕಬಡ್ಡಿಯ ಲೀಗ್‍ನಲ್ಲಿ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿ ತಂಡಕ್ಕೆ ಪವರ್ ಹೆಚ್ಚಿಸಿದ್ದರು. ಕ್ರೀಡೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಪುನೀತ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯಗಳನ್ನು ಸ್ಟೇಡಿಯಂನಲ್ಲಿ ಕೂತು ವೀಕ್ಷಿಸಿ ಅಭಿಮಾನಿಗಳೊಂದಿಗೆ ಸಂಭ್ರಮಿಸುತ್ತಿದ್ದರು.

ಪ್ರೀಮಿಯರ್ ಫುಟ್‍ಬಾಲ್ ಲೀಗ್ ಆರಂಭಗೊಂಡಾಗ ಪುನೀತ್ ರಾಜ್‍ಕುಮಾರ್ ಬೆಂಗಳೂರು ಎಫ್‍ಸಿ ತಂಡದೊಂದಿಗೂ ಕೈ ಜೋಡಿಸಿದ್ದರು. ಜೊತೆಗೆ ಪಂದ್ಯಗಳ ವೀಕ್ಷಣೆಗಳಿಗಾಗಿ ಅಂಕಣಕ್ಕೆ ಬಂದು ನಗು ಮೊಗದಿಂದ ಆಟಗಾರರಿಗೆ ಹುರಿದುಂಬಿಸುತ್ತಿದ್ದ ಅಪ್ಪು ಇನ್ನೂ ನೆನಪು ಮಾತ್ರ. ಇದನ್ನೂ ಓದಿ: T20 ವಿಶ್ವಕಪ್ – ಟೀಂ ಇಂಡಿಯಾದ 6ನೇ ಬೌಲರ್ ಬೌಲಿಂಗ್‍ಗೆ ಎಂಟ್ರಿ

ಅಪ್ಪು ಅಗಲಿಕೆಗೆ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಕೆ.ಎಲ್ ರಾಹುಲ್, ರಾಬಿನ್ ಉತ್ತಪ್ಪ, ವೀರೇಂದ್ರ ಸೆಹ್ವಾಗ್, ಸಹಿತ ಕ್ರೀಡಾಕ್ಷೇತ್ರದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

The post ಆರ್​ಸಿಬಿ, ಬೆಂಗಳೂರು ಬುಲ್ಸ್ ಜೊತೆಗಿತ್ತು ಅಪ್ಪು ಒಡನಾಟ appeared first on Public TV.


Viewing all articles
Browse latest Browse all 80072


<script src="https://jsc.adskeeper.com/r/s/rssing.com.1596347.js" async> </script>