ಮುಂಬೈ: ಮಹಾರಾಷ್ಟ್ರ ಜನರ ಕಷ್ಟಕ್ಕೆ ಬಾಂಬೆ ಹೈಕೋರ್ಟ್ ಸ್ಪಂದಿಸಿದೆ. ತೀವ್ರ ಬರ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಬೇಕಿದ್ದ 13 ಐಪಿಎಲ್ ಪಂದ್ಯಗಳನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಬುಧವಾರ ಹೈಕೋರ್ಟ್ ಬಿಸಿಸಿಐಗೆ ಆದೇಶಿಸಿದೆ.
ರಾಜ್ಯದ ತೀವ್ರ ಬರಗಾಲಕ್ಕೆ ತುತ್ತಾಗಿದ್ದು, ಐಪಿಎಲ್ ಪಂದ್ಯಗಳನ್ನು ಬೇರೆ ಕಡೆ ಸ್ಥಳಾಂತರ ಮಾಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಈ ಆದೇಶ ಪ್ರಕಟಿಸಿದೆ. ಆದರೆ ಏ.30ರ ವರೆಗೆ ನಿಗದಿಯಾಗಿದ್ದ ಪಂದ್ಯಗಳು ಮಹಾರಾಷ್ಟ್ರದಲ್ಲೇ ನಡೆಯಲಿದ್ದು, ಏಪ್ರಿಲ್ 30ರ ನಂತರದ ಎಲ್ಲಾ ಐಪಿಎಲ್ ಪಂದ್ಯಗಳನ್ನು ರಾಜ್ಯದಿಂದ ಸ್ಥಳಾಂತರಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ.
ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡಿದರೆ ಸಮಸ್ಯೆ ಪರಿಹಾರ ಆಗುವುದಿಲ್ಲ. ಮೈದಾನದ ಪಿಚ್ ತಯಾರಿಗೆ ಬಳಸುತ್ತಿದ್ದ ನೀರನ್ನು ಬರ ಪೀಡಿತ ಪ್ರದೇಶಗಳಿಗೆ ನೀಡಿದರೆ ಸ್ವಲ್ಪ ಸಮಸ್ಯೆ ಸುಧಾರಣೆಯಾಗಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಐಪಿಎಲ್ ಆಟಕ್ಕಾಗಿ ಕ್ರಿಕೆಟ್ ಪಿಚ್ ಗಳ ನಿರ್ವಹಣೆಗೆಂದು ಪ್ರತಿದಿನ ಲಕ್ಷಾಂತರ ಲೀಟರ್ ನೀರನ್ನು ದುರುಪಯೋಗಪಡಿಸಲಾಗುತ್ತಿದೆ ಎಂದು ಪ್ರಜಾಸತ್ತೆ ಸುಧಾರಣೆ ಲೋಕಸತ್ತ ಮೂವ್ ಮೆಂಟ್ ಮತ್ತು ಫೌಂಡೇಶನ್ ಪಿಐಎಲ್ ಸಲ್ಲಿಸಿತ್ತು. ಜೊತೆಗೆ ಐಪಿಎಲ್ ಪಂದ್ಯವನ್ನು ಮಹಾರಾಷ್ಟ್ರದಿಂದ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿತ್ತು.
The post ಬರ ಎಫೆಕ್ಟ್: ಮಹಾರಾಷ್ಟ್ರದ 13 ಐಪಿಎಲ್ ಪಂದ್ಯಗಳು ಸ್ಥಳಾಂತರ appeared first on Public TV.