Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80332

ಬ್ರಿಟೀಷರ ಜೊತೆ ಬಿಜೆಪಿ, ಆರ್‍ಎಸ್‍ಎಸ್‍ನವರು ಸೇರಿಕೊಂಡಿದ್ರು: ರಮ್ಯಾ

$
0
0

ಮಂಡ್ಯ: ನಮಗೆ ಸ್ವಾತಂತ್ರ್ಯ ಬರಲು ಕಾಂಗ್ರೆಸ್ ಕಾರಣ. ಬಿಜೆಪಿ, ಆರ್‍ಎಸ್‍ಎಸ್‍ನವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಅವರು ಬ್ರಿಟೀಷರ ಜೊತೆ ಸೇರಿಕೊಂಡಿದ್ರು ಎಂದು ಮಾಜಿ ಸಂಸದೆ ರಮ್ಯಾ ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ.

ಮಂಡ್ಯದಲ್ಲಿ ಎನ್‍ಎಸ್‍ಯುಐ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳ ನಡೆ ದೇಶದ ಕಡೆ ಎಂಬ ಜಾಥ ಹಮ್ಮಿಕೊಂಡಿತ್ತು. ಈ ಜಾಥಾದಲ್ಲಿ ವಿದ್ಯಾರ್ಥಿಗಳು ಸುಮಾರು ಒಂದು ಕಿಲೋಮೀಟರ್ ಉದ್ದದ ರಾಷ್ಟ್ರಧ್ವಜ ಹಿಡಿದು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವೇಳೆ ಮಾತನಾಡಿದ ರಮ್ಯಾ, ಬಿಜೆಪಿ, ಆರ್‍ಎಸ್‍ಎಸ್‍ನವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಅವರು ಬ್ರಿಟೀಷರ ಜೊತೆ ಸೇರಿಕೊಂಡಿದ್ರು ಎಂಬ ಹೇಳಿಕೆ ನೀಡಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬಿಜೆಪಿ ಖಂಡನೆ: ರಮ್ಯಾ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿರುವ ಮಂಡ್ಯ ಬಿಜೆಪಿ ಕಾರ್ಯಕರ್ತರು ರಮ್ಯಾ ಅವರಿಗೆ ಅರೆಹುಚ್ಚು ಹಿಡಿದಿದೆ. ಕೂಡಲೇ ಕಾಂಗ್ರೆಸ್‍ನವರು ರಮ್ಯಾ ಅವರಿಗೆ ಬುದ್ಧಿ ಹೇಳಿ ಅವರಿಗೆ ಚಿಕಿತ್ಸೆ ಕೊಡಿಸಬೇಕು. ಜೊತೆಗೆ ತಾವು ನೀಡಿರುವ ಹೇಳಿಕೆಯನ್ನ ಹಿಂಪಡೆಯುವಂತೆ ಸೂಚಿಸಬೇಕು. ಇಲ್ಲದಿದ್ರೆ ರಮ್ಯಾ ವಿರುದ್ಧ ಉಗ್ರ ಹೋರಾಟ ಮಾಡೋದಾಗಿ ಬಿಜೆಪಿ ಮುಖಂಡ ಸಿಟಿ.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

https://twitter.com/divyaspandana/status/770569795645214720

The post ಬ್ರಿಟೀಷರ ಜೊತೆ ಬಿಜೆಪಿ, ಆರ್‍ಎಸ್‍ಎಸ್‍ನವರು ಸೇರಿಕೊಂಡಿದ್ರು: ರಮ್ಯಾ appeared first on Kannada Public tv.


Viewing all articles
Browse latest Browse all 80332

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>