Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ಭಾರತ್ ಬಂದ್; ನಾಳೆ ಶಾಲೆಗಳಿಗೆ ಎಲ್ಲಿ ರಜೆ? ಎಲ್ಲಿ ಓಪನ್ ಇರುತ್ತೆ?

$
0
0

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಶುಕ್ರವಾರ ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಜೆ ಘೋಷಣೆಯಾಗಿದ್ದರೆ, ಹಲವು ಜಿಲ್ಲೆಗಳಲ್ಲಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಸರ್ಕಾರಿ ಶಾಲಾ, ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಿದ್ದು, ಸಂಜೆಯ ಬಳಿಕ ರಜೆ ನೀಡಬೇಕೋ? ಬೇಡವೋ ಎನ್ನುವುದರ ಬಗ್ಗೆ ಚರ್ಚೆ ನಡೆದು ತೀರ್ಮಾನವನ್ನು ನಿಧಾನವಾಗಿ ಕೈಗೊಳ್ಳಲಾಗುತ್ತಿದೆ.

ಕರ್ನಾಟಕದ ಅನುದಾನ ರಹಿತ ಶಾಲಾ ಶಿಕ್ಷಣ ಮಂಡಳಿ(ಕ್ಯಾಮ್ಸ್) ತನ್ನ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ರಜೆ ಘೋಷಿಸಿದೆ. ನಾಳೆಯ ರಜಾ ಅವಧಿಯನ್ನು ಎರಡು ಶನಿವಾರ ಪೂರ್ಣ ತರಗತಿ ಮಾಡಿ ಸರಿದೂಗಿಸುವಂತೆ ತನ್ನ ಸಂಘಟನೆಯ ಶಾಲೆಗಳಿಗೆ ಆದೇಶ ನೀಡಲಾಗಿದೆ ಎಂದು ಪಬ್ಲಿಕ್ ಟಿವಿಗೆ ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ವಿವಿ ದೂರ ಶಿಕ್ಷಣ ವಿಭಾದ ಪರೀಕ್ಷೆಗಳು ಸೆಪ್ಟೆಂಬರ್ 6ಕ್ಕೆ ಮುಂದೂಡಿಕೆಯಾಗಿದೆ ಎಂದು ವಿವಿ ಮೌಲ್ಯಮಾಪನ ಕುಲಸಚಿವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈ ಜಿಲ್ಲೆಗಳಲ್ಲಿ ಶಾಲೆ ತೆರೆದಿರುತ್ತೆ: ಉಡುಪಿ, ರಾಯಚೂರು, ಕೊಡಗು, ಧಾರವಾಡ, ತುಮಕೂರು, ಶಿವಮೊಗ್ಗ, ವಿಜಯಪುರ, ಉತ್ತರ ಕನ್ನಡ, ಗದಗ, ದಕ್ಷಿಣ ಕನ್ನಡ, ಬಳ್ಳಾರಿ, ಚಿಕ್ಕೋಡಿ, ಕೊಪ್ಪಳ,ಬಾಗಲಕೋಟೆ,ಬೆಳಗಾವಿ,ಮೈಸೂರು,ಆನೇಕಲ್,ಬೀದರ್, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಚಾಮರಾಜನಗರ

ರಜೆ ಘೋಷಣೆಯಾದ ಜಿಲ್ಲೆಗಳು: ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ,

ಇದನ್ನೂ ಓದಿ: ಭಾರತ್ ಬಂದ್ ಗೆ ಸಂಬಂಧಿಸಿದ ಎಲ್ಲ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

The post ಭಾರತ್ ಬಂದ್; ನಾಳೆ ಶಾಲೆಗಳಿಗೆ ಎಲ್ಲಿ ರಜೆ? ಎಲ್ಲಿ ಓಪನ್ ಇರುತ್ತೆ? appeared first on Kannada Public tv.


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ