Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80395

ನಿಜ ಜೀವನದಲ್ಲೂ ಹೀರೋ ಆದ ನಿಖಿಲ್- ವರ್ಷಗಳಿಂದ ಮುಚ್ಚಿದ ದೇವಸ್ಥಾನ ತೆರೆಸಿದ ನಟ

$
0
0

ಕಾರ್ತಿಕೇಯ, ಕಾರ್ತಿಕೇಯ 2 (Karthikeya 2) ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಟ ನಿಖಿಲ್ ಸಿದ್ಧಾರ್ಥ್ (Nikhil Siddarth) ಇದೀಗ ಸಿನಿಮಾದಲ್ಲಿ ಮಾತ್ರವಲ್ಲ, ರಿಯಲ್ ಲೈಫ್‌ನಲ್ಲೂ ಹೀರೋ ಆಗಿದ್ದಾರೆ. ಕೆಲ ವರ್ಷಗಳಿಂದ ಮುಚ್ಚಿದ ದೇವಸ್ಥಾನ (Temple) ನಿಖಿಲ್ ತೆರೆಸಿದ್ದಾರೆ.‌ ಅವರ ಕಾರ್ಯಕ್ಕೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:‘ರಾಜಾ ರಾಣಿ’ ಶೋಗೆ ಎಂಟ್ರಿ ಕೊಟ್ಟ ವಿನಯ್ ಗೌಡ ದಂಪತಿ

ಆಂಧ್ರ ಪ್ರದೇಶದ ಭಾಪಟ್ಲ ಜಿಲ್ಲೆಯ ಚಿರಾಲದ ಬಳಿಯಿರುವ ಈ ದೇವಸ್ಥಾನ ವರ್ಷಗಳಿಂದ ಸೂಕ್ತ ನಿರ್ವಹಣೆ ಇಲ್ಲದ ಕಾರಣ ಶಿಥಿಲಾವಸ್ಥೆ ತಲುಪಿತ್ತು. ಹೀಗಾಗಿ ದೇವಸ್ಥಾನದ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಿಕೊಂಡಿರುವ ನಿಖಿಲ್, ಭಕ್ತರಿಗಾಗಿ ದೇವಸ್ಥಾನದ ಬಾಗಿಲನ್ನ ಈಗ ಮತ್ತೆ ತೆರೆದಿದ್ದಾರೆ.

ಈ ಬಗ್ಗೆ ಸೋಷಿಯಲ್ ವಿಡಿಯೋ ಹಂಚಿಕೊಂಡಿರುವ ನಿಖಿಲ್, ಊರಿನ ಗ್ರಾಮಸ್ಥರಿಗೆ ಶಿಕ್ಷೆಯಾಗಿ ಊರಿನ ದೇವಾಲಯವನ್ನು ಮುಚ್ಚಲಾಗಿತ್ತು. ನಾವು ಕಳೆದ ತಿಂಗಳು ದೇವಾಲಯ ತೆರೆದು ಜೀರ್ಣೋದ್ಧಾರ ಮಾಡಿದೆವು. ಈಗ ಮತ್ತೆ ಅಲ್ಲಿಗೆ ಭೇಟಿ ನೀಡಿದಾಗ ಗ್ರಾಮಸ್ಥರ ಸಂಭ್ರಮ ನೋಡಿ ಖುಷಿಯಾಯ್ತು ಎಂದಿದ್ದಾರೆ. ನಿಖಿಲ್ ನಡೆಯುತ್ತಿರುವಾಗ ಗ್ರಾಮದ ಮಹಿಳೆಯರು ಹಾದಿಗೆ ಹೂವು ಹಾಸಿ ಸ್ವಾಗತ ಕೋರುತ್ತಿರುವ ದೃಶ್ಯವಿದೆ.

ಸದ್ಯ ಕನ್ನಡದ ನಟಿ ನಭಾ ನಟೇಶ್ (Nabha Natesh) ಜೊತೆ ‘ಸ್ವಯಂಭು’ ಸಿನಿಮಾದಲ್ಲಿ ನಿಖಿಲ್ ನಾಯಕನಾಗಿ ನಟಿಸುತ್ತಿದ್ದಾರೆ. ಇಂಡಿಯನ್ ಹೌಸ್ ಎಂಬ ಹೊಸ ಸಿನಿಮಾವನ್ನು ನಟ ಒಪ್ಪಿಕೊಂಡಿದ್ದಾರೆ.


Viewing all articles
Browse latest Browse all 80395

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>