Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80375

ಸಾಲ ವಾಪಸ್ ಕೊಡುತ್ತೇನೆಂದು ಕರೆಸಿ ಮಹಿಳೆ ಕೊಲೆ –ರೇಷ್ಮೆ ತೋಟದಲ್ಲಿ ಶವ ಹೂತಿಟ್ಟು ಆರೋಪಿ ಎಸ್ಕೇಪ್!

$
0
0

ರಾಮನಗರ: ಸಾಲ ವಾಪಸ್ ಕೊಡುತ್ತೇನೆಂದು ಕರೆಸಿ ಮಹಿಳೆಯನ್ನ ಕೊಲೆ ಮಾಡಿ, ರೇಷ್ಮೆ ತೋಟದಲ್ಲಿ ಶವ ಹೂತಿಟ್ಟು ಆರೋಪಿ ಎಸ್ಕೇಪ್‌ ಆಗಿರುವ ಘಟನೆ ಕನಕಪುರ (Kanakapura) ತಾಲೂಕಿನ ಚೋಕಸಂದ್ರ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದ ನಿವಾಸಿ ಸುನಂದಮ್ಮ (65) ಕೊಲೆಯಾದ ಮಹಿಳೆ. ಚೊಕ್ಕಸಂದ್ರ ಗ್ರಾಮದ ರವಿ ಎಂಬಾತನಿಂದ ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ. ಆರೋಪಿ ಪತ್ತೆಗೆ ಪೊಲೀಸರು (Police) ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸ್ಮೃತಿ ಇರಾನಿಯಿಂದ ಅಜಯ್ ಮಿಶ್ರಾವರೆಗೆ- ʼಲೋಕʼ ಚುನಾವಣೆಯಲ್ಲಿ ಸೋತ ಕೇಂದ್ರ ಸಚಿವರು ಯಾರ‍್ಯಾರು?

2 ವರ್ಷಗಳ ಹಿಂದೆ ಸುನಂದಮ್ಮ ಎಂಬ ಮಹಿಳೆ ಬಳಿಕ ರವಿ ಎಂಬಾತ 20 ಸಾವಿರ ರೂ. ಸಾಲ ಪಡೆದಿದ್ದ ಎನ್ನಲಾಗಿದೆ. ಸಾಲ ವಾಪಸ್‌ ನೀಡುವಂತೆ ಸುನಂದಮ್ಮ ಪದೇ – ಪದೇ ಪೀಡಿಸುತ್ತಿದ್ದ. ಹಾಗಾಗಿ ಮಂಗಳವಾರ ಸಾಲ ವಾಪಸ್ಸ್ ಕೊಡುತ್ತೇನೆ ಎಂದು ಕರೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಮಾಡಿ ಮಹಿಳೆ ಶವವನ್ನ ತನ್ನ ರೇಷ್ಮೆ ತೋಟದಲ್ಲಿ ಆರೋಪಿ ಹೂತಿಟ್ಟಿರೋದು ಬೆಳಕಿಗೆ ತಡವಾಗಿ ಬಂದಿದೆ.

ಮಂಗಳವಾರ ಸಂಜೆ ಮನೆಯಿಂದ ಹೊರಟಿದ್ದ ಸುನಂದಮ್ಮ ರಾತ್ರಿಯಾದರೂ ಮನೆಗೆ ವಾಪಸ್ಸ್ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಪುತ್ರ ಕನಕಪುರ ಪೊಲೀಸ್‌ ಠಾಣೆಯಲ್ಲಿ (Kanakapura Police Station) ದೂರು ದಾಖಲಿಸಿದ್ದಾನೆ. ನಂತರ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರಿಗೆ ಆರೋಪಿ ರವಿ, ಸುನಂದಮ್ಮ ಬಳಿ ಸಾಲ ಪಡೆದಿದ್ದ ಅನ್ನೋದು ಗೊತ್ತಾಗಿದೆ.

ಇದರಿಂದ ಅನುಮಾನಗೊಂಡ ಪೊಲೀಸರು ರವಿ ಮನೆ, ತೋಟ ಪರಿಶೀಲನೆ ನಡೆಸುತ್ತಿದ್ದ, ಆರೋಪಿ ರವಿಗೆ ಸೇರಿದ್ದ ರೇಷ್ಮೆತೋಟದಲ್ಲಿ ಸುನಂದಮ್ಮ ಶವ ಪತ್ತೆಯಾಗಿದೆ. ಸಾಲ ವಾಪಸ್ಸ್ ಕೇಳಿದ್ದಕ್ಕೆ ಸುನಂದಮ್ಮಳನ್ನ ಕೊಲೆ ಮಾಡಿ ತನ್ನ ತೋಟದಲ್ಲೇ ಮಣ್ಣುಮಾಡಿ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಿಜ ಜೀವನದಲ್ಲೂ ಹೀರೋ ಆದ ನಿಖಿಲ್- ವರ್ಷಗಳಿಂದ ಮುಚ್ಚಿದ ದೇವಸ್ಥಾನ ತೆರೆಸಿದ ನಟ

ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಎರಡಂಕಿ ಫಲಿತಾಂಶ ಬರದಿರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ – ಸತೀಶ್ ಜಾರಕಿಹೊಳಿ 


Viewing all articles
Browse latest Browse all 80375

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>