Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80385

ಸುದೀಪ್‌ಗೂ ಮುನ್ನ ಶಿವಣ್ಣಗೆ ‘ಸಪ್ತಸಾಗರದಾಚೆ ಎಲ್ಲೋ’ನಿರ್ದೇಶಕ ಆ್ಯಕ್ಷನ್ ಕಟ್

$
0
0

ಗೋಧಿ ಬಣ್ಣ ಸಾಧಾರಣ ಮೈಕಟ್ಟು, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳಿಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಹೇಮಂತ್ ರಾವ್ ಈಗ ಶಿವರಾಜ್‌ಕುಮಾರ್ ಜೊತೆಗಿನ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸುದೀಪ್‌ಗೂ (Sudeep) ಮುನ್ನ ಶಿವಣ್ಣಗೆ (Shivarajukumar) ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ:ಬ್ರೈನ್ ಹ್ಯಾಮ್ರೇಜ್‌ನಿಂದ ನಟಿ ರಿಷ್ತಾ ಲಬೋನಿ ಶಿಮಾನಾ ನಿಧನ

ಸಿನಿಮಾದಿಂದ ಸಿನಿಮಾ ಹೊಸ ಬಗೆಯ ಕಥೆ ಹೇಳುವ ಹೇಮಂತ್ ರಾವ್ ಅವರು ಇದೀಗ ಆ್ಯಕ್ಷನ್ ಡ್ರಾಮಾ ಜಾನರ್ ಕಥೆ ಕೈಗೆತ್ತಿಕೊಂಡಿದ್ದಾರೆ. ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಮಾಡುವಾಗಲೇ ಈ ಕಥೆ ಹೊಳೆದಿದ್ದು, ಸ್ಕ್ರೀಪ್ಟ್‌ ಡೆವಲಪ್ ಮಾಡಿದ್ದರು. ಹೇಮಂತ್ (Hemanth Rao) ಬರೆದ ಕಥೆ ಕೇಳಿ ವಿಭಿನ್ನ ಎನಿಸಿ ಚಿತ್ರಕ್ಕೆ ಶಿವಣ್ಣ ಓಕೆ ಎಂದಿದ್ದಾರೆ. ಈಗ ಸಿನಿಮಾ ಕೆಲಸ ಕೂಡ ಶುರುವಾಗಿದೆ.

ಸಿನಿಮಾಗೆ ತೆರೆ ಮರೆಯಲ್ಲಿ ಸಾಕಷ್ಟು ಸಿದ್ಧತೆ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಟೈಟಲ್ ಕೂಡ ಘೋಷಣೆ ಆಗಲಿದ್ದು, ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಿಂದ ಹೇಮಂತ್ ರಾವ್ ಮತ್ತು ಶಿವಣ್ಣ (Shivarajkumar) ಕಾಂಬಿನೇಷನ್ ಸಿನಿಮಾ ಶೂಟಿಂಗ್ ಶುರುವಾಗಲಿದೆ.

ಈ ಸಿನಿಮಾದ ನಂತರವೇ ಸುದೀಪ್ ಜೊತೆ ಹೇಮಂತ್ ರಾವ್ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಸುದೀಪ್ ಕೂಡ ‘ಮ್ಯಾಕ್ಸ್’ ಬಳಿಕ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಿದ್ದು, ನಂತರ ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿ ಬರಲಿದೆಯಂತೆ. ಅಧಿಕೃತ ಘೋಷಣೆಗೆ ಕಾಯಬೇಕಿದೆ.


Viewing all articles
Browse latest Browse all 80385

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>