Quantcast
Channel: Public TV – Latest Kannada News, Public TV Kannada Live, Public TV News
Viewing all articles
Browse latest Browse all 80565

ತಮಿಳುನಾಡಿಗೆ ನೀರು: ಸರ್ಕಾರದ ವಿರುದ್ಧ ರೈತರಿಂದ ರಾತ್ರಿ ಪ್ರತಿಭಟನೆ

$
0
0

-ಸುಪ್ರಿಂಕೋರ್ಟ್‍ನಲ್ಲಿ ಇಂದು ಮರುಪರಿಶೀಲನಾ ಅರ್ಜಿ ವಿಚಾರಣೆ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸೋದಿಲ್ಲ ಅಂತ ಶಪಥ ಮಾಡಿದ್ದ ಸರ್ಕಾರ, ಸದನದ ನಿರ್ಣಯದಂತೆ ರಾತ್ರೋರಾತ್ರಿ 4 ಸಾವಿರ ಕ್ಯೂಸೆಕ್ ನೀರು ಹರಿಸಿದೆ.

cauvery-water-1

ಸೋಮವಾರದಂದು ಸದನದಲ್ಲಿ ಸಿಎಂ ಸಾಹೇಬ್ರು ನಮ್ಮ ರಾಜ್ಯದ ರೈತರ ಬೆಳೆ ಹಾಳಾಗಿದೆ ಅಂತ ಒಪ್ಪಿಕೊಂಡಿದ್ರು. ಇಂಥಾ ಸಮಯದಲ್ಲಿ ತಮಿಳುನಾಡಿಗೆ ಮತ್ತೆ ನೀರು ಬಿಟ್ರೆ ಕಾವೇರಿ ಕೊಳ್ಳದ ರೈತರು ಸುಮ್ಮನಿರಲ್ಲ ಅಂತಾನೂ ಲೆಕ್ಕಾಚಾರ ಹಾಕಿದ್ರು. ಅದಕ್ಕೆ ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ ನೀರು ಕೊಟ್ಟು, ನಮ್ಮ ರಾಜ್ಯದ ನಾಲೆಗಳಿಗೆ ಬರೀ 2856 ಕ್ಯೂಸೆಕ್ ನೀರು ಹರಿಸಿದ್ದಾರೆ. ಆದ್ರೆ ತಮಿಳುನಾಡಿಗೆ ನೀರು ಬಿಟ್ಟಿರೋದು ಸುಪ್ರೀಂಕೋರ್ಟ್‍ನ ನ್ಯಾಯಾಂಗ ನಿಂದನೆಯಿಂದ ಪಾರಾಗಲು ಸರ್ಕಾರ ಹೆಣದಿರುವ ರಣತಂತ್ರ ಅನ್ನೋದು ಕಾನೂನು ಪಂಡಿತರ ಲೆಕ್ಕಚಾರ.

cauvery-water-3

ರಾತ್ರಿ 10 ಗಂಟೆಯಿಂದಲೇ ಸದ್ದಿಲ್ಲದೇ ಕೆಆರ್‍ಎಸ್‍ನಿಂದ ತಮಿಳುನಾಡಿಗೆ ನೀರು ಹರಿಸೋ ಕೆಲಸವನ್ನ ಅಧಿಕಾರಿಗಳು ಶುರುಮಾಡಿದ್ರು. ವಿಷಯ ಗೊತ್ತಾಗ್ತಿದ್ದಂತೆ ರೈತ ಮುಖಂಡರು ಜಲಾಶಯದ ಮುಂದೆ ತಡರಾತ್ರಿ ಪ್ರತಿಭಟನೆ ಮಾಡಿದ್ರು. ರಾಜ್ಯ ಸರ್ಕಾರ ರೈತರ ಕಣ್ಣೊರೆಸುವ ತಂತ್ರ ಮಾಡ್ತಿದೆ. ನಮ್ಮ ಜಿಲ್ಲೆಯ ನಾಲೆಗಳಿಗೆ ನೀರು ಹರಿಸೋ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸ್ತಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಭಯದಲ್ಲಿ ರಾತ್ರೋರಾತ್ರಿ ಕೆಆರ್‍ಎಸ್‍ಗೆ ಭದ್ರತೆ ಹೆಚ್ಚಿಸಲಾಗಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ ಸೇರಿದಂತೆ ನಾಲ್ಕು ತಾಲೂಕುಗಳಲ್ಲಿ 3 ದಿನಗಳ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

cauvery-water-4

ಸುಪ್ರೀಂಕೋರ್ಟ್‍ನಲ್ಲಿ ಇವತ್ತು ಎರಡು ಅರ್ಜಿಗಳು ವಿಚಾರಣೆಗೆ ಬರಲಿವೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಯಲಿದೆ. ಮಧ್ಯಾಹ್ನ 2ಗಂಟೆಗೆ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಉದಯ್ ಲಲಿತ್ ಪೀಠ ವಿಚಾರಣೆ ನಡೆಸಲಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಆದೇಶ ನೀಡಲು ಸುಪ್ರೀಂಕೋರ್ಟ್ ವ್ಯಾಪ್ತಿಯಲ್ಲಿ ಬರುವುದಿಲ್ಲ. ಸಂಸತ್ತಿನ ಉಭಯ ಸದನಗಳಲ್ಲಿ ಮಂಡಳಿ ರಚನೆ ಪ್ರಸ್ತಾಪವಾಗಿ ಒಪ್ಪಿಗೆ ಸಿಗಬೇಕು. ಹಾಗಾಗಿ ಸೆಪ್ಟೆಂಬರ್ 30ರ ಆದೇಶವನ್ನ ಮರುಪರಿಶೀಲಿಸಬೇಕು ಅಂತಾ ಕೇಂದ್ರ ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ.

cauvery-water-2

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಆದೇಶ ದೋಷಪೂರಿತ. ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಆದೇಶಿಸುವಂತಿಲ್ಲ. ಅಲ್ಲದೆ ನೀರು ಬಿಡುಗಡೆಯ ಬಗ್ಗೆ ಸೆ.20, 27, 30 ರಂದು ನೀಡಿದ ಆದೇಶಗಳನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ಕೂಡ ವಿಚಾರಣೆಗೆ ಬರಲಿದೆ. ಇವತ್ತು ಮಧ್ಯಾಹ್ನ 2ಗಂಟೆಯೊಳಗೆ ತಮಿಳುನಾಡಿಗೆ ನೀರು ಬಿಡುಗಡೆ ಬಗ್ಗೆ ನಿಲುವು ತಿಳಿಸಿ ಅಂತಾ ರಾಜ್ಯಕ್ಕೆ ತಾಕೀತು ಮಾಡಿದ್ದ ಸುಪ್ರೀಂಕೋರ್ಟ್‍ಗೆ ರಾಜ್ಯದ ಪರ ವಕೀಲರು ಮಾಹಿತಿಯನ್ನು ಒದಗಿಸಲಿದ್ದಾರೆ. ರೈತರ ಬೆಳೆಗಳಿಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೂ ನೀರು ಹರಿಸುತ್ತಿರೋದ್ರಿಂದ ರಾಜ್ಯ ಸರ್ಕಾರ ನ್ಯಾಯಾಂಗ ನಿಂದನೆಯಿಂದ ಪಾರಾಗಲಿದೆ. ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಈ ಎರಡು ಅರ್ಜಿಗಳನ್ನ ವಿಚಾರಣೆ ನಡೆಸಿ ಏನು ಆದೇಶ ಕೊಡ್ತಾರೋ ಅನ್ನೋ ಕುತೂಹಲವಿದೆ.

 


Viewing all articles
Browse latest Browse all 80565

Trending Articles


Final chapter from Krishnamacharya's Yogasanagalu Part II Pranayam. Plus the...


ನಟಿ ರಚಿತಾ ರಾಮ್ ಆಸೆ ಏನು ಗೊತ್ತಾ…!


ಕಾರ್ಪೋರೇಟರ್ ಅವ್ವ ಮಾದೇಶ  ಜೀವಾವಧಿ ಶಿಕ್ಷೆಗೆ ಕಾರಣವಾದ ` ಜೋಡಿ ಕೊಲೆ’ಯ  ಇನ್ ಸೈಡ್ ಸ್ಟೋರಿ…


ಜು.25 ರಂದು ಮತ್ತೆ ದೆಹಲಿಗೆ ಸಿಎಂ ಮತ್ತು ಡಿಸಿಎಂ


ಚಿಕ್ಕ ಮಕ್ಕಳಿಗೆ ಸೆಕ್ಸ್ ಎಜುಕೇಷನ್ ಪಾಠ ಮಾಡಿದ ಯೋಗೀಶ್ ಮಾಸ್ಟರ್ –ವಿಡಿಯೋ ವೈರಲ್


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮದುವೆ ನಂತರ ಬ್ಲೂ ಫಿಲಂ ನೋಡಿದರೆ ಏನಾಗುತ್ತೆ?


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


How Pattabhi Jois learned Yoga from Krishnamacharya ( from Interviews )


ಶಾಕಿಂಗ್: ಸೆಕ್ಸ್ ವೇಳೆಯೇ ಉಸಿರುಗಟ್ಟಿ ಸಾವನ್ನಪ್ಪಿದ್ಲು ಯುವತಿ


ಪ್ರೀ ವೆಡ್ಡಿಂಗ್ ಶೂಟ್ ಬಳಿಕ ಕೊಲೆ ಸಂಚು: ಪುಣೆಯಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ….!


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಹಾಸ್ಯ : ಪಿತೃ ಪಕ್ಷದಲ್ಲಿ ಭರ್ಜರಿ ಭೋಜನಕ್ಕೆ ಮುನ್ನ ಕಾಗೆಗಳ ಮೀಟಿಂಗು!


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ


Aadu Aata Aadu Kannada Songs Download


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ವಚನಗಳಿಂದ ಸಂಗೀತ ಲೋಕ ಶ್ರೀಮಂತ